ವಿದ್ಯಾರ್ಥಿಗಳು ವಿದ್ಯಾರ್ಥಿ ದೆಸೆಯಿಂದಲೇ ಬರವಣಿಗೆಯಲ್ಲಿ ಆಸಕ್ತಿ ರೂಢಿಸಿಕೊಳ್ಳಬೇಕು. ವಯಸ್ಸು ಬೆಳೆದಂತೆ ಪ್ರಬುದ್ಧತೆಯೂ ಮೈಗೂಡುತ್ತದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಎಸ್.ಎಂ. ಜಯಕರ ತಿಳಿಸಿದ್ದಾರೆ.
ದಿಶಾ ಭಾರತ್ ಮತ್ತು ಈಸ್ಟ್ ವೆಸ್ಟ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸಹಯೋಗದಲ್ಲಿ ನನ್ನ ಭಾರತ ಅಭಿಯಾನ ನಿಮಿತ್ತ ಕಾರ್ಯಕ್ರಮ ಜರುಗಿತು.
‘ಸ್ವಾತಂತ್ರ್ಯ ನಂತರದ ಭಾರತ’ ಎಂಬ ವಿಷಯದ ಕುರಿತು ಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.
ಈ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದ ವಿದ್ಯಾರ್ಥಿಗಳಿಗೆ ಕುಲಪತಿಗಳು ಅಭಿನಂದನೆ ಸಲ್ಲಿಸಿದರು.
ಉತ್ತಮ ಬರವಣಿಗೆಯಿಂದ ಆರೋಗ್ಯಪೂರ್ಣ ಸಮಾಜದ ಜೊತೆಗೆ ಸಮೃದ್ಧ ಭಾರತ ನಿರ್ಮಾಣ ಸಾಧ್ಯ ಎಂದರು.
ಕರ್ನಾಟಕ ಸಂಸ್ಕೃತಿ ವಿವಿ ಕುಲಸಚಿವ ಡಾ.ಎಂ. ಕೊಟ್ರೇಶ್ ಅವರು ಮಾತನಾಡಿ, ವ್ಯಕ್ತಿಯೊಬ್ಬನ ಜ್ಞಾನವನ್ನು ಅಭಿವ್ಯಕ್ತಗೊಳಿಸಲು ಸೂಕ್ತ ವೇದಿಕೆ ಅಗತ್ಯವಿದೆ. ಪ್ರತಿಭೆಗಳನ್ನು ಗುರುತಿಸಿ ಬೆಳೆಸುವ ಕಾರ್ಯ ಇಂದಿನ ಅವಶ್ಯಕತೆಯಾಗಿದೆ. ಸೃಜನ ಹಾಗೂ ಸೃಜನೇತರ ಶೈಲಿಯ ಬರಹಗಳು ಪ್ರಾಮುಖ್ಯತೆ ಪಡೆದಿವೆ. ಹೆಚ್ಚು ಹೆಚ್ಚು ಸೃಜನಶೀಲ ಸಾಹಿತ್ಯ ನಿರ್ಮಾಣವಾಗಬೇಕಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಈಸ್ಟ್ ವೆಸ್ಟ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥೆ ರಶ್ಮಿ ರವಿಕಿರಣ್ ವಹಿಸಿದ್ದರು. ದೇಶ ಭಾರತ ಸಂಸ್ಥಾಪಕಿ ಹಾಗೂ ನಿರ್ದೇಶಕಿ ರೇಖಾ ರಾಮಚಂದ್ರನ್, ದಯಾನಂದ್ ಸಾಗರ್, ದಂತ ವೈದ್ಯ ಕಾಲೇಜಿನ ಪ್ರಾಂಶುಪಾಲರಾದ ಡಾ. ಹೇಮಂತ್ ಮಾದಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.