Friday, April 3, 2026
Friday, April 3, 2026

ವರದಕ್ಷಿಣೆ ಹಣ, ಸಮಾಜಸೇವೆಗೆ…

Date:

ವಿವಾಹದ ಸಂದರ್ಭದಲ್ಲಿ ವಧುವಿನ ಕಡೆಯವರು ವರನಿಗೆ ವರದಕ್ಷಿಣೆ ಕೊಡುವ ಅನಿಷ್ಟ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ವಧುಯೊಬ್ಬರು ತಮ್ಮ ಮದುವೆಗೆಂದು (ವರದಕ್ಷಿಣೆ) ಇರಿಸಿದ್ದ 75 ಲಕ್ಷ ರೂಗಳನ್ನು ಸಾಮಾಜಿಕ ಕಾರ್ಯಕ್ಕಾಗಿ ನೀಡಿದ್ದಾರೆ.

ರಾಜಸ್ಥಾನದ, ಬಾರ್ಮೇರ್ ಜಿಲ್ಲೆಯ ಉದ್ಯಮಿ ಕಿಶೋರ್ ಸಿಂಗ್ ಕನೋದ್ ಅವರ ಮಗಳ ಅದುವೇ ಇತ್ತೀಚೆಗೆ ನೆರವೇರಿತು. ವಧುವಿನ ಹೆಸರು ಅಂಜಲಿ ಕನ್ವಾರ್ . ತಂದೆ ಕಿಶೋರ್ ಅವರು ಮಗಳ ವಿವಾಹದ ಸಂದರ್ಭದಲ್ಲಿ, ವರನಿಗೆ ವರದಕ್ಷಿಣೆ ರೂಪದಲ್ಲಿ 75 ಲಕ್ಷವನ್ನು ರೂಪಾಯಿಗಳನ್ನು ತೆಗೆದಿರಿಸಿದ್ದರು. ಆದರೆ ಮದುಮಗಳು ಅಂಜಲಿ ಬುದ್ಧಿವಂತಿಕೆಯನ್ನು ಉಪಯೋಗಿಸಿದರು. ಮದುವೆಯ ಹಿಂದಿನ ದಿನ ಆಕೆ, ತಮ್ಮ ತಂದೆಯ ಬಳಿ ಹೋಗಿ ‘ವರದಕ್ಷಿಣೆ ನೀಡಲು ತೆಗೆದಿಟ್ಟ ಹಣವನ್ನು ಬಾಲಕಿಯರ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕೆ ನೀಡಿ’ ಎಂದು ಕೇಳಿಕೊಂಡರು. ಇದಕ್ಕೆ ತಂದೆ ಸಂತೋಷದಿಂದ ಒಪ್ಪಿದರು.

ಮದುವೆಯ ದಿನ ಮಂಟಪದಲ್ಲಿ ಇದರ ಬಗ್ಗೆ ಕಿಶೋರ್ ಘೋಷಣೆ ಮಾಡಿದ್ದರು. ಮಗಳಿಗೆ ಖಾಲಿ ಚೆಕ್ ನೀಡಿ, ಎಷ್ಟು ದೇಣಿಗೆ ನೀಡಬೇಕು. ಅದನ್ನು ಚೆಕ್ ನಲ್ಲಿ ನಮೂದಿಸಿ ಎಂದು ಹೇಳಿದರು. ಚೆಕ್ ನಲ್ಲಿ ಅಂಜಲಿಯವರು 75ಲಕ್ಷ ನಮೂದಿಸಿದರು.

ನಂತರ ಅದನ್ನು ಹಾಸ್ಟೆಲ್ ಕಟ್ಟಡ ನಿಧಿಗೆ ಅರ್ಪಿಸಲಾಯಿತು. ಹಾಸ್ಟೆಲ್ ನಿರ್ಮಿಸುತ್ತಿರುವ ತಾರಾತರ ಆಡಳಿತವರ್ಗವು ಕಿಶೋರ್ ಅವರ ದಾನ ಗುಣವನ್ನ ಮೆಚ್ಚಿದೆ.
“ನಾವು ನಿರ್ಮಿಸುತ್ತಿರುವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಕಿಶೋರ್ ಅವರು ಈ ಮೊದಲೇ ಒಂದು ಕೋಟಿ ದೇಣಿಗೆ ನೀಡಿದ್ದರು. ಕೆಲಸ ಪೂರ್ಣಗೊಳಿಸಲು ಇನ್ನೂ 50 ರಿಂದ 75 ಲಕ್ಷ ಹಣದ ಅಗತ್ಯವಿತ್ತು. ಈಗ ಕಿಶೋರ್ ಅವರು ಅದನ್ನು ಒದಗಿಸಿದ್ದಾರೆ” ಎಂದು ತಾರಾತರ ಮಠವು ಮಾಹಿತಿ ನೀಡಿದೆ. ಈ ವರದಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಧುವಿನ ನಡೆಗೆ ಬಾರಿ ಮೆಚ್ಚುಗೆ ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.S. Arun ಸೂಕ್ತ ವಿಲೇವಾರಿಯಾಗದ ಘನತ್ಯಾಜ್ಯ: ಸಾರ್ವಜನಿಕ ಆರೋಗ್ಯ, ಪರಿಸರದ ಮೇಲೆ ಪರಿಣಾಮ- ಡಿ‌.ಎಸ್.ಅರುಣ್

D.S. Arun ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ...

S.N. Channabasappa ಸತ್ತಮೇಲೆಯೂ ಹಗೆತನ ಸಾಧಿಸುವ ವಿಕೃತ ಮನಸ್ಥಿತಿಯನ್ನು ಹಿಂದೂ ಸಮಾಜ‌ ಒಪ್ಪುವುದಿಲ್ಲ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ನಗರದ ಸೂಳೆಬೈಲಿನ ಹಿಂದೂ ರುದ್ರಭೂಮಿಯಲ್ಲಿ ಹತ್ಯೆಯಾದ ಬಾಲಕ...

Karnataka Sahitya Academy ಸಾಹಿತ್ಯ ಅಕಾಡೆಮಿಯಿಂದ ವಿವಿಧ ಪ್ರಕಾರಗಳ ಕೃತಿಗಳ ಪುಸ್ತಕ ಬಹುಮಾನಕ್ಕೆ ಆರ್ಜಿ ಆಹ್ವಾನ

Karnataka Sahitya Academy ಕರ್ನಾಟಕ ಸಾಹಿತ್ಯ ಅಕಾಡೆಮಿಯು 2025 ನೇ ವರ್ಷದಲ್ಲಿ...

Karnataka University ನಾಯಕತ್ವ ಗುಣ ರೂಪುಸುವಲ್ಲಿ ವಿದ್ಯಾರ್ಥಿ ಸಂಸತ್ತು ಸಹಕಾರಿ-ಪ್ರೊ.ಜೆ.ಎಂ.ನಾಗಯ್ಯ

Karnataka University ಪ್ರಜಾಪ್ರಭುತ್ವದ ಸಬಲತೆಗೆ ಸಮರ್ಥ ನಾಯಕತ್ವ ಅಗತ್ಯ. ಪರಿಣಾಮಕಾರಿಯಾಗಿ ವಿಷಯ...