Saturday, May 23, 2026
Saturday, May 23, 2026

ಹಾಸನದಲ್ಲಿ ವಾಣಿಜ್ಯಮಳಿಗೆ; ಸಿಸಿಟಿವಿ ಹೊಂದಿರಬೇಕು.

Date:

ಹಾಸನದ ಹೊರವಲಯದಲ್ಲಿರುವ ಗ್ರಾನೈಟ್ ಉದ್ಯಮಿಗಳ ಮನೆಯಲ್ಲಿ 2 ಕೋಟಿ ರೂ.ಗಳ ಕಳ್ಳತನ ನಡೆದಿದದೆ. ಅಪರಾಧ ತಡೆಯಲು ವಾಣಿಜ್ಯ ಸಂಸ್ಥೆಗಳ ಆವರಣದಲ್ಲಿ ಕ್ಲೋಸ್ಡ್ ಸರ್ಕ್ಯೂಟ್ ಟೆಲಿವಿಷನ್ (ಸಿಸಿಟಿವಿ) ಕ್ಯಾಮೆರಾಗಳನ್ನು ಅಳವಡಿಸುವಂತೆ ಜಿಲ್ಲಾ ಪೊಲೀಸರು ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ಸೂಚಿಸಿದ್ದಾರೆ.
ನಿರ್ಲಕ್ಷ್ಯ ವಹಿಸುವ ಮಾಲೀಕರಿಗೆ ದಂಡ ವಿಧಿಸುವ ಎಚ್ಚರಿಕೆಯನ್ನೂ ಪೊಲೀಸರು ನೀಡಿದ್ದಾರೆ. ಪೊಲೀಸ್ ಸುರಕ್ಷತಾ (ಕ್ರಮಗಳು) ಜಾರಿ ಕಾಯಿದೆಯಡಿ, ಹಾಸನ ಪೊಲೀಸರು ಕ್ಲೋಸ್ಡ್-ಸರ್ಕ್ಯೂಟ್ ಟೆಲಿವಿಷನ್‌ಗಳನ್ನು ಅಳವಡಿಸುವಂತೆ ಚಿನ್ನಾಭರಣ ಅಂಗಡಿಗಳು / ಶೋ ರೂಂಗಳು ಮತ್ತು ಹೋಟೆಲ್‌ಗಳು ಸೇರಿದಂತೆ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ ನೊಟೀಸ್ ನೀಡಿದ್ದಾರೆ. ಇಲ್ಲದಿದ್ದರೆ ಅವರು ಶಿಸ್ತು ಕ್ರಮವನ್ನು ಎದುರಿಸಬೇಕಾಗುತ್ತದೆ. ಪ್ರತಿಯೊಬ್ಬ ನಾಗರಿಕರ ರಕ್ಷಣೆ ಪೋಲಿಸ್ ಇಲಾಖೆಯ ಜವಾಬ್ದಾರಿಯಾಗಿದೆ. ಆದರೆ, ಪ್ರತಿಯೊಬ್ಬ ವ್ಯಕ್ತಿಗೆ ಮತ್ತು ಪ್ರತಿ ಅಂಗಡಿಗೆ ಭದ್ರತೆಯನ್ನು ಒದಗಿಸುವುದು ಅಸಾಧ್ಯ. ಪೊಲೀಸರು ಸಾಕಷ್ಟು ಜಾಗರೂಕರಾಗಿದ್ದರರೂ, ಈ ನಿಟ್ಟಿನಲ್ಲಿ ಸಾರ್ವಜನಿಕ ಸಹಭಾಗಿತ್ವವು ಪ್ರಮುಖ ಪಾತ್ರ ವಹಿಸುತ್ತದೆ.
ಸಾರ್ವಜನಿಕರು ರಾತ್ರಿ ಸಮಯದಲ್ಲಿ ತಮ್ಮ ಮನೆಗಳಲ್ಲಿ ಲೈಟ್‌ಗಳನ್ನು ಆನ್ ಮಾಡುವಂತೆ ಪೊಲೀಸರು ವಿನಂತಿಸಿದ್ದಾರೆ. ಗೇಟ್‌ಗಳಿಗೆ ಬೀಗ ಹಾಕುವಿಕೆಯು ಮನೆಯೊಳಗೆ ಯಾರೂ ಇಲ್ಲದಿರುವ ಬಗ್ಗೆ ದುಷ್ಕರ್ಮಿಗಳಿಗೆ ಸುಳಿವು ನೀಡುವುದರಿಂದ, ವಿಶ್ವಾಸಾರ್ಹ ವ್ಯಕ್ತಿಯನ್ನು (ಸಂಬಂಧಿ ಅಥವಾ ಸ್ನೇಹಿತ) ಅಲ್ಲಿಯೇ ಇರಲು ಕೇಳುವುದು ಉತ್ತಮ ಎಂದು ಅವರು ಹೇಳಿದ್ದಾರೆ. ಒಂದೇ ಮಾಲೀಕತ್ವ ಹೊಂದಿರುವ ಅಂಗಡಿಗಳಲ್ಲಿ ಮತ್ತು ಸಂಸ್ಥೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆದರೆ ಸಮಿತಿ ಅಥವಾ ಗುಂಪುಗಳು ನಿರ್ವಹಿಸುವ ಸ್ಥಳಗಳಲ್ಲಿ CCTV ಇರುವುದಿಲ್ಲ. ಡಿಜಿಟಲ್ ವೀಡಿಯೋ ರೆಕಾರ್ಡರ್‌ಗಳ (ಡಿವಿಡಿ) ಮೊತ್ತವು ನಗರದಲ್ಲಿನ 32 ಚಾನೆಲ್‌ಗಳಿಂದ (ಕ್ಯಾಮರಾಗಳು) ಫೀಡ್‌ಗಳನ್ನು ಪಡೆಯುತ್ತವೆ.
ಕಳ್ಳತನ ಪ್ರಕರಣದ ಸಂಬಂಧ ಹಾಸನ ಉಪವಿಭಾಗ 106ರಲ್ಲಿ ವಾಣಿಜ್ಯ ಮಳಿಗೆಗಳನ್ನು ಗುರುತಿಸಲಾಗಿದ್ದು, ಅವು ನಗರ ಠಾಣೆ, ವಿಸ್ತರಣಾ ಠಾಣೆ ಹಾಗೂ ಪಿಂಚಣಿ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುತ್ತವೆ ಎಂದು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ.ವಿ. ಉದಯಭಾಸ್ಕರ್ ಅವರು ತಿಳಿಸಿದರು. “ಕ್ಯಾಮೆರಾಗಳನ್ನು ಅಳವಡಿಸಲು ನಾವು ಈ ಅಂಗಡಿಗಳ ಮಾಲೀಕರಿಗೆ ನೋಟಿಸ್ ನೀಡಿದ್ದೇವೆ. ಅವರಲ್ಲಿ ಐದು ಮಂದಿ ಸಮಯ ಕೇಳುತ್ತಿದ್ದಾರೆ ಮತ್ತು ಅವರಿಗೆ ನೋಟೀಸ್ ಅನ್ನು ಎರಡು ಬಾರಿ ಸಲ್ಲಿಸಿದ್ದೆವೆ. ಅವರು ನಮ್ಮ ಮೂರನೇ ನೋಟಿಸ್‌ಗೆ ಪ್ರತಿಕ್ರಿಯಿಸಲು ವಿಫಲವಾದರೆ ಅವರಿಗೆ 5,000 ರೂಪಾಯಿ ದಂಡ ವಿಧಿಸಲಾಗುವುದು., ಅದರ ನಂತರ ಪ್ರತಿಕ್ರಿಯೆ ನೀಡದಿದ್ದರೆ 10 ಸಾವಿರ ರೂಪಾಯಿ ದಂಡ ಹಾಗೂ ಕಾನೂನು ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ ಎಂದು ಡಿಸಿಪಿ ಹೇಳಿದರು‌. ನಗರದಲ್ಲಿ ಅಂಗಡಿ ಹಾಗೂ ಮನೆಗಳಿಗೆ ಕ್ಯಾಮೆರಾಗಳನ್ನು ಅಳವಡಿಸುವಂತೆ ನಾವು ಮನವೊಲಿಸುತ್ತಿದ್ದೆವೆ. ಇಂದಿನಂತೆ ನಗರ ವ್ಯಾಪ್ತಿಯಲ್ಲಿ 333 ಕ್ಯಾಮೆರಾಗಳಿವೆ ಎಂದು ಅವರು ವಿವರಿಸಿದರು.
ಕೆಲವು ಸಂದರ್ಭಗಳಲ್ಲಿ ಕಳ್ಳರು ಡಿವಿಆರ್‌ಗಳೊಂದಿಗೆ ಪರಾರಿಯಾಗಿದ್ದಾರೆ. ಕನಿಷ್ಠ ಮೂರು ತಿಂಗಳ ಕಾಲ ಕ್ಲೌಡ್‌ನಲ್ಲಿ ಡೇಟಾವನ್ನು ಉಳಿಸಲು ಮಾಲೀಕರಿಗೆ ನಿರ್ದೇಶನ ನೀಡಲಾಗಿದೆ ಎಂದು ” ಎಸ್‌ಪಿ ಆರ್. ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ತಾತ್ಕಾಲಿಕ ನೇರ ನೇಮಕಾತಿ ಮೂಲಕಖಾಯಂ ಶಿಕ್ಷಕರ ನೇಮಕಾತಿವರೆಗೆ ಅತಿಥಿ ಶಿಕ್ಷಕರ ನೇಮಕ

Shimoga News 2026-27ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು...

Klive Special Article ನೇಪಾಳದಲ್ಲಿ ಶೃಂಗೇರಿ ಜಗದ್ಗುರುಗಳು.

ವಿಶೇಷ ವರದಿ: ಪ್ರಭಾಕರ ಕಾರಂತ Klive Special Article ಜಗದ್ಗುರು ಶ್ರೀ ವಿಧುಶೇಖರ ಭಾರತೀ...

Eshwara Khandre ಶ್ರಾವ್ಯಾ ಸಾಗರ್ ನಿರ್ಮಾಣದ ಸಾಕ್ಷ್ಯಚಿತ್ರಕ್ಕೆ ಜೀವವೈವಿಧ್ಯ ಪ್ರಶಸ್ತಿ.

Eshwara Khandre ಕರ್ನಾಟಕ ಸರ್ಕಾರದ ಜೀವವೈವಿದ್ಯ ಮಂಡಳಿ ಕೊಡಮಾಡುವ ೨೦೨೫-೨೬ನೇ ಸಾಲಿನ...