Wednesday, October 2, 2024
Wednesday, October 2, 2024

ಕಸಾಪ ಅಧ್ಯಕ್ಷರಾಗಿ ಡಾ.ಮಹೇಶ್ ಜೋಶಿ ಪದಗ್ರಹಣ.

Date:

ಕಸಾಪ ಅಧ್ಯಕ್ಷರನ್ನಾಗಿ ಮತದಾರರು ನನ್ನನ್ನು ಚುನಾಯಿಸಿದ್ದಾರೆ. ನನ್ನನ್ನು ಐದು ವರ್ಷಗಳ ಕಾಲ ಯಾರು ಅಲುಗಾಡಿಸವಾಗುವುದಿಲ್ಲ . ಬೇರೆ ಅಕಾಡೆಮಿ, ಸಂಸ್ಥೆಗಳಲ್ಲಾದರೆ ಸರಕಾರ ನೇಮಕ ಮಾಡುತ್ತದೆ. ಯಾವಾಗ ಬೇಕೋ ಆಗ ತೆಗೆಯುವ ಅಧಿಕಾರವು ಸರ್ಕಾರಕ್ಕೆ ಇರುತ್ತದೆ. ಆದರೆ ಕಸಾಪ ಅಧ್ಯಕ್ಷ ಸ್ಥಾನ ಅಂಥದಲ್ಲ ಎಂದು ಮಹೇಶ್ ಜೋಶಿ ತಿಳಿಸಿದರು.
ಕಸಾಪದ 26ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳಿಗೆ ಅಮೂಲಾಗ್ರ ಬದಲಾವಣೆ ತರಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತಜ್ಞರು ಸಮಿತಿ ರಚಿಸಲಾಗುವುದು. ಕಸಾಪ ಆಡಳಿತ ಮಂಡಳಿಗೆ 1915 ರಲ್ಲಿ ನಿಯಮಾವಳಿಗಳನ್ನು ಜಾರಿಗೆ ತರಲಾಯಿತು. ತದನಂತರ ತಿದ್ದುಪಡಿ ಮಾಡಿಲ್ಲ. ಇದರಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ ನಿಬಂಧನೆ ಅಥವಾ ನಿಯಮಗಳನ್ನು ಅಮೂಲಾಗ್ರವಾಗಿ ಬದಲಾಯಿಸಬೇಕಾಗಿದೆ ಎಂದರು.
ಪರಿಷತ್ತಿನ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಲು ಬಿಡುವುದಿಲ್ಲ. ಅಂತಹ ಸಂಗತಿಗಳು ನನ್ನ ಗಮನಕ್ಕೆ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಅಂತವರ ಸದಸ್ಯತ್ವವನ್ನು ಮೂರು ವರ್ಷಗಳ ಕಾಲ ಅಮಾನತು ಮಾಡಲಾಗುವುದು ಜೋಶಿ ತಿಳಿಸಿದರು.
ಕಸಾಪಗೆ ದೊಡ್ಡ ಇತಿಹಾಸವಿದೆ. ಈ ಸಂಸ್ಥೆಗೆ ನನ್ನ ಪತಿ ಚುನಾಯಿತರಾಗಿರುವುದು ಖುಷಿಯ ವಿಚಾರ. ಅವರು ರಾಜ್ಯಕ್ಕೆ, ಭಾಷೆಗೆ ಪ್ರತಿನಿಧಿಯಾಗಿದ್ದಾರೆ. ಅವರದ್ದು ಹೋರಾಟದ ಮನೋಭಾವ. ಹೀಗಾಗಿ ಅವರನ್ನು ಸಮಾಜಕ್ಕೆ ಮುಡುಪಾಗಿಟ್ಟಿದ್ದೇವೆ. ಅದಕ್ಕೆ ನಮ್ಮ ಕುಟುಂಬದ ಎಲ್ಲರೂ ಸಹಕಾರ ನೀಡುತ್ತೇವೆ ಎಂದು ಮಹೇಶ್ ಜೋಶಿ ಅವರ ಪತ್ನಿ ಮಾಲತಿ ಜೋಶಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಪರಿಹಾರ ರೂಪದಲ್ಲಿ ಪಡೆದಿದ್ದ ನಿವೇಶನಗಳನ್ನ ಪತ್ನಿ ಹಿಂದಿರುಗಿಸಿದ್ದಾರೆ- ಸಿದ್ಧರಾಮಯ್ಯ

CM Siddharamaih ಮೈಸೂರಿನ ಮುಡಾ ಭೂಸ್ವಾಧೀನ ನಡೆಸದೆ ವಶಕ್ಕೆ ಪಡೆದಿದ್ದ...

R. Ashok ಸಿದ್ಧರಾಮಯ್ಯನವರಿಗೆ ತಮ್ಮ ತಪ್ಪಿನ ಅರಿವಾಯಿತಲ್ಲ”-ಆರ್ .ಅಶೋಕ್ ಪ್ರತಿಕ್ರಿಯೆ

R. Ashok ಮೂಡಾ ಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ಧರಾಮಯ್ಯ...

Shivamogga-Bhadravathi Urban Development Authority ಊರಗಡೂರು ನಿವೇಶನ ಪಡೆಯಲು ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ಮುಂದೂಡಿಕೆ

Shivamogga-Bhadravathi Urban Development Authority ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರವು ಶಿವಮೊಗ್ಗ ನಗರದ...