Monday, December 15, 2025
Monday, December 15, 2025

ಕಸಾಪ ಅಧ್ಯಕ್ಷರಾಗಿ ಡಾ.ಮಹೇಶ್ ಜೋಶಿ ಪದಗ್ರಹಣ.

Date:

ಕಸಾಪ ಅಧ್ಯಕ್ಷರನ್ನಾಗಿ ಮತದಾರರು ನನ್ನನ್ನು ಚುನಾಯಿಸಿದ್ದಾರೆ. ನನ್ನನ್ನು ಐದು ವರ್ಷಗಳ ಕಾಲ ಯಾರು ಅಲುಗಾಡಿಸವಾಗುವುದಿಲ್ಲ . ಬೇರೆ ಅಕಾಡೆಮಿ, ಸಂಸ್ಥೆಗಳಲ್ಲಾದರೆ ಸರಕಾರ ನೇಮಕ ಮಾಡುತ್ತದೆ. ಯಾವಾಗ ಬೇಕೋ ಆಗ ತೆಗೆಯುವ ಅಧಿಕಾರವು ಸರ್ಕಾರಕ್ಕೆ ಇರುತ್ತದೆ. ಆದರೆ ಕಸಾಪ ಅಧ್ಯಕ್ಷ ಸ್ಥಾನ ಅಂಥದಲ್ಲ ಎಂದು ಮಹೇಶ್ ಜೋಶಿ ತಿಳಿಸಿದರು.
ಕಸಾಪದ 26ನೇ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆಗಳಿಗೆ ಅಮೂಲಾಗ್ರ ಬದಲಾವಣೆ ತರಲು ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತಜ್ಞರು ಸಮಿತಿ ರಚಿಸಲಾಗುವುದು. ಕಸಾಪ ಆಡಳಿತ ಮಂಡಳಿಗೆ 1915 ರಲ್ಲಿ ನಿಯಮಾವಳಿಗಳನ್ನು ಜಾರಿಗೆ ತರಲಾಯಿತು. ತದನಂತರ ತಿದ್ದುಪಡಿ ಮಾಡಿಲ್ಲ. ಇದರಲ್ಲಿ ಸಾಕಷ್ಟು ಲೋಪದೋಷಗಳಿವೆ. ಹೀಗಾಗಿ ನಿಬಂಧನೆ ಅಥವಾ ನಿಯಮಗಳನ್ನು ಅಮೂಲಾಗ್ರವಾಗಿ ಬದಲಾಯಿಸಬೇಕಾಗಿದೆ ಎಂದರು.
ಪರಿಷತ್ತಿನ ಗೌರವಕ್ಕೆ ಧಕ್ಕೆ ತರುವಂತಹ ಕೆಲಸ ಮಾಡಲು ಬಿಡುವುದಿಲ್ಲ. ಅಂತಹ ಸಂಗತಿಗಳು ನನ್ನ ಗಮನಕ್ಕೆ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಅಂತವರ ಸದಸ್ಯತ್ವವನ್ನು ಮೂರು ವರ್ಷಗಳ ಕಾಲ ಅಮಾನತು ಮಾಡಲಾಗುವುದು ಜೋಶಿ ತಿಳಿಸಿದರು.
ಕಸಾಪಗೆ ದೊಡ್ಡ ಇತಿಹಾಸವಿದೆ. ಈ ಸಂಸ್ಥೆಗೆ ನನ್ನ ಪತಿ ಚುನಾಯಿತರಾಗಿರುವುದು ಖುಷಿಯ ವಿಚಾರ. ಅವರು ರಾಜ್ಯಕ್ಕೆ, ಭಾಷೆಗೆ ಪ್ರತಿನಿಧಿಯಾಗಿದ್ದಾರೆ. ಅವರದ್ದು ಹೋರಾಟದ ಮನೋಭಾವ. ಹೀಗಾಗಿ ಅವರನ್ನು ಸಮಾಜಕ್ಕೆ ಮುಡುಪಾಗಿಟ್ಟಿದ್ದೇವೆ. ಅದಕ್ಕೆ ನಮ್ಮ ಕುಟುಂಬದ ಎಲ್ಲರೂ ಸಹಕಾರ ನೀಡುತ್ತೇವೆ ಎಂದು ಮಹೇಶ್ ಜೋಶಿ ಅವರ ಪತ್ನಿ ಮಾಲತಿ ಜೋಶಿಯವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...