Wednesday, January 21, 2026
Wednesday, January 21, 2026

ಕೃಷಿಕರ ಬೇಡಿಕೆಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ಚರ್ಚೆ.

Date:

ರೈತರ ಬೇಡಿಕೆಗಳ ಬಗ್ಗೆ ಕೇಂದ್ರ ಸರ್ಕಾರದ ಗಮನ ಹರಿಸಲು, ದೆಹಲಿಯ ಸಂಸತ್ ಭವನದ ವರೆಗೆ ನಡೆಸಲು ಉದ್ದೇಶಿಸಿದ್ದ ಟ್ಯಾಕ್ಟರ್ ರಾಲಿಯನ್ನು ಬಿಟ್ಟಿರುವುದಾಗಿ ರೈತ ಸಂಘಟನೆಗಳ ಒಕ್ಕೂಟದ ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.

ಸಂಸತ್ತಿನ ಚಳಿಗಾಲದ ಅಧಿವೇಶನವು ನ.29ರಂದು ಆರಂಭವಾಗಲಿದೆ. ಅದೇ ದಿನ ಟ್ಯಾಕ್ಟರ್ ರಾಲಿ ನಡೆಸಲು ರೈತರ ಸಂಘಟನೆಗಳ ಒಕ್ಕೂಟ ಎಸ್ ಕೆ ಎಂ ತೀರ್ಮಾನಿಸಲಾಗಿತ್ತು.

ಈಗ ಸಂಸತ್ತು ಭವನದವರೆಗೆ ನಡೆಸಲು ಉದ್ದೇಶಿಸಿದ್ದ ರಾಲಿ ರದ್ದಾಗಿದೆ.

ನಮ್ಮ ಬೇಡಿಕೆಗಳ ಕುರಿತು ಪ್ರಧಾನಿಗೆ ಪತ್ರ ಬರೆದಿದ್ದೇವೆ.ಅದರ ಪ್ರತಿಕ್ರಿಯೆಯನ್ನು ಎದುರು ನೋಡುತ್ತಿದ್ದೇವೆ. ಡಿಸೆಂಬರ್ ನಾಲ್ಕರಂದು ಮತ್ತೊಂದು ಸಭೆ ನಡೆಸುತ್ತೇವೆ. ಅನಂತರ ಹೋರಾಟಕ್ಕೆ ನಿರ್ಧರಿಸುತ್ತೇವೆ ಎಂದು ಎಸ್ ಕೆ ಎಂ ಮುಖಂಡ ದರ್ಶನ್ ಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸರ್ಕಾರವು ರೈತರೊಂದಿಗೆ ಗೌರವದಲ್ಲಿ ಮಾತುಕತೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ಪ್ರತಿಭಟನೆಯನ್ನು ಕೈಬಿಡುವಂತೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ಮನವಿ ಮಾಡಿದ್ದರು.
‘ಭತ್ತದ ಕೂಳೆಗೆ ಬೆಂಕಿ ಹಾಕುವುದನ್ನು ಅಪರಾಧ ಎಂದು ಪರಿಗಣಿಸಬಾರದು ಎಂಬ ಕೃಷಿಕರ ಬೇಡಿಕೆಯನ್ನು ಸರ್ಕಾರ ಒಪ್ಪಿಕೊಂಡಿದೆ. ಬೆಳೆ ವೈವಿಧ್ಯತೆ, ಕನಿಷ್ಠ ಬೆಂಬಲ ಬೆಲೆ ಖಾತರಿ ಸೇರಿದಂತೆ ಇತರೆ ಬೇಡಿಕೆಗಳ ಬಗ್ಗೆ ಚರ್ಚೆ ನಡೆಸಬೇಕಿದೆ. ಪ್ರಧಾನಮಂತ್ರಿ ಈಗಾಗಲೇ ಪ್ರಕಟಗೊಳಿಸಿರುವ ಅಂತೆ ಸಮಿತಿ ರಚನೆಯೊಂದಿಗೆ ಈ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದಾರೆ.

ಪ್ರತಿಭಟನನಿರತ ರೈತರ ಮೇಲೆ ಹೇರಿರುವ ಮೊಕದ್ದಮೆಗಳನ್ನು ವಾಪಸಾತಿಯು ರಾಜ್ಯಗಳ ವ್ಯಾಪ್ತಿಗೆ ಬರಲಿದೆ. ಪ್ರಕರಣಗಳ ಗಂಭೀರತೆ ಆಧರಿಸಿ ಪ್ರಕರಣ ಕೈಬಿಡುವುದು ಮತ್ತು ಪರಿಹಾರ ಘೋಷಣೆ ಕುರಿತು ರಾಜ್ಯ ಸರ್ಕಾರ ತೀರ್ಮಾನಿಸಬೇಕಿದೆ. ಮೂರು ಕೃಷಿ ಕಾಯ್ದೆಗಳನ್ನು ಕೈ ಬಿಡಲಾಗುವುದು ಎಂದು ಸರ್ಕಾರ ಪ್ರಕಟಿಸಿದ ನಂತರ ಮುಷ್ಕರ ಮುಂದುವರೆಯುವುದ ರಲ್ಲಿ ಅರ್ಥವಿಲ್ಲ. ಅದಕ್ಕಾಗಿ ದೊಡ್ಡ ಮನಸ್ಸು ಮಾಡಿ ಧರಣಿ ಕೈಬಿಡಬೇಕು ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...