ರೂಪಾಂತರಿ ವೈರಸ್ ಓಮಿಕ್ರಾನ್ ವಿದೇಶಗಳಲ್ಲಿ ಕಂಡುಬಂದಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದೆ ರಾಜ್ಯದಲ್ಲಿ ರೂಪಾಂತರ ತಳಿ ಪತ್ತೆಯಾಗಿಲ್ಲ ದ ಕಾರಣ ಲಾಕ್ ಡೌನ್ ಅನಗತ್ಯ. ಈ ಬಗ್ಗೆ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ರೂಪಾಂತರಿ ವೈರಸ್ಸಿನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳ ಮೇಲೆ ನಿಗಾ ಇಡಲು ಸೂಚಿಸಿದ್ದೇನೆಯೇ ಹೊರತು, ಶಾಲೆಗಳನ್ನು ಮುಚ್ಚಲು ಎಲ್ಲಿಯೂ ತಿಳಿಸಿಲ್ಲ. ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದು ಎಂದು ಸಿಎಂ ಹೇಳಿದ್ದಾರೆ.
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಲಾಕ್ ಡೌನ್ ಕುರಿತು ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಸೋಂಕು ಪೀಡಿತ ದಕ್ಷಿಣ ಆಫ್ರಿಕಾದಿಂದ ನಗರಕ್ಕೆ ಬಂದ ಇಬ್ಬರು ಪ್ರಯಾಣಿಕರ ಪೈಕಿ ಒಬ್ಬರಲ್ಲಿ ಡೆಲ್ಟಾಗಿಂತ ಭಿನ್ನವಾದ ವೈರಸ್ ಪತ್ತೆಯಾಗಿದೆ. ವ್ಯಕ್ತಿಯ ಮಾದರಿಯನ್ನು ಕೇಂದ್ರಸರ್ಕಾರದ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಸೋಂಕು ತಡೆಯಲು ರಾಜ್ಯ ಸರ್ಕಾರ ಈ ಹಿಂದಿನ ‘5 ಟಿ’ (ಟೆಸ್ಟ್, ಟ್ರೇಸ್, ಟ್ರ್ಯಾಕ್, ಟ್ರೀಟ್ ಹಾಗೂ ಟೆಕ್ನಾಲಜಿ )ಸೂತ್ರಗಳನ್ನು ಅನುಸರಿಸುತ್ತದೆ” ಎಂದು ತಿಳಿಸಿದರು.