Monday, December 15, 2025
Monday, December 15, 2025

ಗಂಧದಗುಡಿ: ಅಪ್ಪುನ ಆತ್ಮೀಯ ಕೊಡುಗೆ.

Date:

ದೊಡ್ಮನೆ ಹುಡುಗ ಎಂದೇ ಖ್ಯಾತಿಯಾಗಿರುವ ನಟ ದಿ. ಪುನೀತ್ ರಾಜಕುಮಾರ್ ಅವರು ನಮ್ಮನ್ನಗಲಿ ಸುಮಾರು ಒಂದು ತಿಂಗಳು ಕಳೆದಿದೆ. ಆದರೂ ಸಹ ಅವರ ಅಭಿಮಾನಿಗಳು ಹಾಗೂ ಕುಟುಂಬವರ್ಗದವರು ನೋವಿನಲ್ಲೇ ಇದ್ದಾರೆ.

ಪುನೀತ್ ರಾಜಕುಮಾರ್ ಅವರ ತಿಂಗಳ ಪುಣ್ಯಸ್ಮರಣೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್ ಹಾಗೂ ಪುನೀತ್ ಅವರ ಪತ್ನಿ ಅಶ್ವಿನಿ ಸೇರಿದಂತೆ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪುನೀತ್ ಅವರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಕುರಿತು ರಾಘವೇಂದ್ರ ರಾಜಕುಮಾರ್ ಮಾತನಾಡಿದರು. ಗಂಧದಗುಡಿ ಬಂದು ಸಾಕ್ಷ್ಯಚಿತ್ರ. ಅದನ್ನು ಅಪ್ಪು ಅವರು ಪುನೀತ್ ರಾಜಕುಮಾರ ಆಗಿ ಮಾಡಿಲ್ಲ. ಬದಲಾಗಿ ಒಬ್ಬ ಸಾಮಾನ್ಯ ವ್ಯಕ್ತಿಯಾಗಿ ಯಾವುದೇ ಮೇಕಪ್ ಇಲ್ಲದೆ ನಟಿಸಿ, ಉತ್ತಮ ಸಂದೇಶವನ್ನು ನೀಡಿದ್ದಾರೆ. ಅದು ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ವನ್ಯಜೀವಿ, ವನ್ಯಲೋಕ ಎಷ್ಟು ಪ್ರಮುಖ ಹಾಗೂ ಅದರ ರಕ್ಷಣೆ ಎಷ್ಟು ಮುಖ್ಯ ಎನ್ನುವುದು ಇದರಲ್ಲಿದೆ. ಹಾಗೂ ಕಾಡು ನಾಶ ತಡೆ ಮತ್ತು ಬುಡಕಟ್ಟು ಜನರ ಬಗ್ಗೆ ಇಲ್ಲಿ ಮಾಹಿತಿ ಇದೆ. ಇಡೀ ಪ್ರಪಂಚಕ್ಕೆ ಇದು ಅನ್ವಯಿಸುತ್ತದೆ. ಅಪ್ಪು ಬಿಟ್ಟುಹೋಗಿರುವ ಕೊನೆಯ ಆಸ್ತಿ ಇದಾಗಿದೆ ಎಂದರು.
ಯಾವುದೇ ಸಹಾಯ ಮಾಡಿದರು ಅದು ಬೇರೆಯವರಿಗೆ ಗೊತ್ತಾಗಬಾರದು ಎಂಬ ದಾರಿಯಲ್ಲಿ ಅಪ್ಪು ನಡೆದಿದ್ದಾರೆ. ನಾವು ಅವರ ಕೆಲಸವನ್ನು ಮುಂದುವರಿಸಿಕೊಂಡು ಹೋಗುವ ಬಗ್ಗೆ ಬಹಿರಂಗವಾಗಿ ಹೇಳಿದರೆ ಆತನಿಗೆ ದ್ರೋಹ ಮಾಡಿದ ಹಾಗೆ ಆಗುತ್ತದೆ. ಅಪ್ಪುವಿನ ಕನಸು ಹಾಗೂ ಕೆಲಸಗಳನ್ನು ಪ್ರತಿಯೊಬ್ಬರು ನಡೆಸಿಕೊಂಡು ಹೋಗುತ್ತೇವೆ. ಅಪ್ಪು ವ್ಯಕ್ತಿತ್ವ ಎಲ್ಲರ ಗಮನ ಸೆಳೆದಿದೆ. ಈ ಗುಣವನ್ನು ಇಷ್ಟು ಚಿಕ್ಕ ವಯಸ್ಸಿನಲ್ಲಿ ಅಪ್ಪು ಪಡೆದಿದ್ದರು. ಇದು ನಮ್ಮ ತಂದೆಯ ಗುಣ. ಇಷ್ಟು ಬೇಗ ನಮ್ಮನ್ನಗಲಿ ಹೋಗಲು ನಮ್ಮ ಪ್ರೀತಿ ಜಾಸ್ತಿ ಆಯ್ತಾ ಅಥವಾ ಅವರಿಗೆ ಪ್ರೀತಿ ಸಾಲಲ್ಲ ಇಲ್ಲವೇ ಎಂದು ತಿಳಿಯುತ್ತಿಲ್ಲ ಎಂದು ರಾಘವೇಂದ್ರ ರಾಜಕುಮಾರ್ ಭಾವುಕರಾಗಿ ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...