Sunday, July 26, 2026
Sunday, July 26, 2026

ವಿದೇಶಿ ಪ್ರಯಾಣಿಕರ ಮಾಹಿತಿ ರಾಜ್ಯ ಸರ್ಕಾರಕ್ಕೆ ಬೇಕು.

Date:

ಕೊರೋನಾ ರೂಪಾಂತರಿ ತಳಿ ಓಮೈಕ್ರಾನ್ ಜಗತ್ತಿನಾದ್ಯಂತ ಹರಡುತ್ತಿದೆ. ಈ ವೈರಸ್ ನನ್ನು ತಡೆಗಟ್ಟಲು, ವಿದೇಶದಿಂದ ಬಂದ ಪ್ರಯಾಣಿಕರ ಮಾಹಿತಿಯನ್ನು ಕೇಂದ್ರ ಸರ್ಕಾರವು ನಿಯಮಿತವಾಗಿ ರಾಜ್ಯಸರ್ಕಾರಗಳಿಗೆ ನೀಡಬೇಕು. ಆಗ ಮಾತ್ರ ವಿದೇಶಿ ಪ್ರಯಾಣಿಕರನ್ನು ಪತ್ತೆ ಮಾಡಲು ಸಾಧ್ಯ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.

ಮುಂಬೈ ಮತ್ತು ಮಹಾರಾಷ್ಟ್ರದ ಬೇರೆ ವಿಮಾನ ನಿಲ್ದಾಣಕ್ಕೆ, ಬಂದಿಳಿದ ವಿದೇಶಿ ಪ್ರಯಾಣಿಕರನ್ನು ಗುರುತಿಸಲು ನಮಗೆ ಸಾಧ್ಯವಾಗುತ್ತದೆ. ಆದರೆ ಬೇರೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ಬಂದಿಳಿದು ಅನಂತರ ಬಸ್, ರೈಲು, ಕಾರು ದೇಶ ವಿಮಾನದ ಮೂಲಕ ಮಹಾರಾಷ್ಟ್ರಕ್ಕೆ ಬರುವ ವಿದೇಶಿ ಪ್ರಯಾಣಿಕರನ್ನು ಪತ್ತೆ ಮಾಡಲು ಸಾಧ್ಯವಿಲ್ಲ. ಅವರಿಗೆ ಓಮೈಕ್ರಾನ್ ತಳಿಯಿಂದ ಕೋವಿಡ್ ಬಂದರೆ, ಅದನ್ನು ಪತ್ತೆ ಮಾಡಲು ಸಾಧ್ಯವಿಲ್ಲ ಎಂದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಈ ಅಪಾಯವನ್ನು ತಡೆಯಬೇಕೆಂದರೆ, ವಿದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರ ವಿವರವನ್ನು ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ನೀಡಬೇಕು. ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prahlad Joshi ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದೀ ಕರ್ತವ್ಯ ಸ್ವೀಕರಿಸುತ್ತಿದ್ದೇನೆ- ಪ್ರಹ್ಲಾದ ಜೋಷಿ.

Prahlad Joshi ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವರಾಗಿ ಶ್ರೀ ಪ್ರಹ್ಲಾದ...

Samarth Ramdas”ಸಾತ್ವಿಕ ಹೃದಯಿ” ಸಮರ್ಥ ರಾಮದಾಸರು. ಲೇ; ಪ್ರಸಾದ್ ಶ್ರೀವತ್ಸ, ದಾವಣಗೆರೆ.

Samarth Ramdas ಜಾಂಬ ಎಂಬ ಪುಟ್ಟ ಹಳ್ಳಿ ಔರಂಗಾಬಾದ್‌ ಜಿಲ್ಲೆಯಲ್ಲಿದೆ. ಅಲ್ಲಿ...

K.S.Eshwarappa ಕನಕರ ಸ್ಥಳಮಾಹಿತಿ ಉತ್ಖನನ ಕಾರ್ಯ ಅರ್ಥಪೂರ್ಣ. ಇಂತಹ ಸಂಶೋಧನೆಗಳಿಗೆ ನನ್ನ ಬೆಂಬಲವಿದೆ – ಕೆ.ಎಸ್.ಈಶ್ವರಪ್ಪ.

K.S.Eshwarappa ಪ್ರಸ್ತುತ ಸಮಾಜದಲ್ಲಿ ಇತಿಹಾಸ ಪ್ರಜ್ಞೆ ಕೊರತೆಯಿದೆ. ಇಂತಹಸನ್ನಿವೇಶದಲ್ಲಿ ಇತಿಹಾಸ ಪ್ರಾಧ್ಯಾಪಕ,...

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜಿನಾಮೆ,ಕೇವಲ ನೈತಿಕ ಜವಾಬ್ದಾರಿ ಎತ್ತಿ ಹಿಡಿದಿದೆ ಅಷ್ಟೆ- ವಸಂತಕುಮಾರ್.

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಕೇವಲ ನೈತಿಕತೆಯ ಜವಾಬ್ದಾರಿ ಎತ್ತಿ...