ಕೃಷ್ಣ ನದಿ ನೀರು ವಿವಾದ ನ್ಯಾಯಮಂಡಳಿ ಅಂತಿಮ ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸಬೇಕು. ಕರ್ನಾಟಕ ಮತ್ತು ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯ ಬಗ್ಗೆ ನಿರ್ಧರಿಸಲು ಎರಡುವಾರಗಳ ಸಮಯ ನೀಡಬೇಕು ಎಂದು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಅನ್ನು ಕೇಳಿಕೊಂಡಿದೆ.
ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ನೇತೃತ್ವದ ನ್ಯಾಯಪೀಠದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಲಾಯಿತು.
ಸರ್ಕಾರದ ಪರವಾಗಿ ಹಿರಿಯ ವಕೀಲ ವಾಸೀಂ ಖಾದ್ರಿ ಮಾತನಾಡಿದರು. ಕೇಂದ್ರ ಜಲ ಸಚಿವಾಲಯದಿಂದ ಸೂಚನೆ ಪಡೆಯಲು ಎರಡು ವಾರ ಬೇಕು ಎಂದರು. ಈ ವಿಷಯದ ಸರ್ಕಾರದ ಪರಿಗಣಿಸಲಿದೆ ಎಂದು ಅವರು ತಿಳಿಸಿದ್ದಾರೆ. ನ್ಯಾಯಪೀಠದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 13ಕ್ಕೆ ಮುಂದೂಡಲಾಗಿದೆ.