ರಾಮ ಜನ್ಮಭೂಮಿ ವಿವಾದ ಕುರಿತು ತೀರ್ಪನ್ನು ಕಾನೂನು ಆಧಾರದ ಮೇಲೆ ನೀಡಲಾಗಿದೆ. ಧರ್ಮದ ಆಧಾರದ ಮೇಲೆ ಅಲ್ಲ ಎಂದು ಸುಪ್ರೀಂಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗೋಯಿ ತಿಳಿಸಿದ್ದಾರೆ.
“ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ನೀಡಿದ ತೀರ್ಪು ನನ್ನ ವೈಯಕ್ತಿಕ ನಿರ್ಧಾರವಾಗಿರಲಿಲ್ಲ. ಅದು ಸುಪ್ರೀಂ ಕೋರ್ಟ್ ನ ನಿರ್ಧಾರವಾಗಿತ್ತು ” ಎಂದು ಹೇಳಿದರು.
ನ್ಯಾಯ ಪೀಠದಲ್ಲಿದ್ದ 50 ನ್ಯಾಯಮೂರ್ತಿಗಳು 3-4 ತಿಂಗಳ ಅವಧಿಯಲ್ಲಿ 900 ಪುಟಗಳ ತೀರ್ಪು ಬರೆದಿದ್ದಾರೆ. ದೇಶದ ಸಂವಿಧಾನ ಮತ್ತು ಕಾನೂನಿನ ಆಧಾರದ ಮೇಲೆ ಈ ತೀರ್ಪನ್ನು ನೀಡಲಾಗುತ್ತದೆ. ಇದರ ಹೊರತು ಧರ್ಮ ಆಧರಿಸಿಲ್ಲ. ಒಬ್ಬ ನ್ಯಾಯಾಧೀಶರಿಗೆ ಸಂವಿಧಾನವೇ ಧರ್ಮವಾಗಿರುತ್ತದೆ ಎಂದು ಮಾಜಿ ಮುಖ್ಯ ನ್ಯಾಯಮೂರ್ತಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ನಿವೃತ್ತಿ ಹೊಂದಿದ ಆರು ತಿಂಗಳ ನಂತರ ರಾಜ್ಯ ಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಅವರ ಈ ನಡೆ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗಳಿಗೆ ವ್ಯಕ್ತವಾಗಿದ್ದವು. ಈ ಸಂದರ್ಭದಲ್ಲಿ ಆಗ ಚುನಾವಣೆಗೆ ಸ್ಪರ್ಧಿಸುವ ತಮ್ಮ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು.