ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿಯಾಗಿ ಪ್ರೊ. ನಿರಂಜನ ವಾನಳ್ಳಿ ಅವರನ್ನು ನೇಮಿಸಲಾಗಿದೆ. ಕುಲಪತಿ ಶೋಧನಾ ಸಮಿತಿ ಶಿಫಾರಸ್ಸಿನ ಆಧಾರದಂತೆ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕ ನಿರಂಜನ ವಾನಳ್ಳಿ ಅವರನ್ನು ನೇಮಕಮಾಡಿದೆ.
ನಿರಂಜನ ವಾನಳ್ಳಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರಾಗಿ, ದೂರ ಶಿಕ್ಷಣ ವಿಭಾಗದ ನಿರ್ದೇಶಕರಾಗಿ ಹಾಗೂ ಹರಿಯಾಣ ವಿಶ್ವವಿದ್ಯಾಲಯಕ್ಕೆ ಪ್ರೆಸಿಡೆಂಟ್ ನಾಮಿನಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 33 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.