Monday, August 3, 2026
Monday, August 3, 2026

ಮುಷ್ಕರ ಮುಂದುವರೆಸಿದ ನಿವಾಸಿ ವೈದ್ಯರು.

Date:

ಸರ್ಕಾರಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು ರಾಜ್ಯ ನಿವಾಸಿ ವೈದ್ಯರ ಒಕ್ಕೂಟದ ನೇತೃತ್ವದಲ್ಲಿ ಕೈಗೊಂಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರಿದಿದೆ.
ಮೊದಲ ದಿನ ಆಸ್ಪತ್ರೆಗಳ ತುರ್ತು ಸೇವೆಗಳಿಗೆ ಅಡ್ಡಿಯಾಗದೆ ಒಪಿಡಿ ಮತ್ತು ಎಲೆಕ್ಟಿವ್ ಓಟಿಗಳಿಂದ ಹೊರಗೆ ಉಳಿದಿದ್ದ ಅವರು ಎರಡನೆಯ ದಿನ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಮಹಾವಿದ್ಯಾಲಯದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.
2018 19 ನೇ ಶೈಕ್ಷಣಿಕ ವರ್ಷದ ಪ್ರಕಾರ ಶೈಕ್ಷಣಿಕ ಶುಲ್ಕವನ್ನು ಪುನಾರಚಿಸಬೇಕು. ನಿವಾಸಿ ವೈದ್ಯರಿಗೆ ಕೋವಿಡ್ ಭತ್ಯೆಯನ್ನು ನೀಡಬೇಕು. ನೀಟ್ ಮತ್ತು ಪಿಜಿ ಕೌನ್ಸಲ್ಲಿಂಗ್ ಅನ್ನು ತ್ವರಿತಗೊಳಿಸಬೇಕೆಂದು ಆಗ್ರಹಿಸಿದರು. ಕೊವಿಡ್ ಭತ್ಯೆ ಕೊಡುವುದಾಗಿ ಆರೋಗ್ಯ ಸಚಿವರು ನೀಡಿದ ಭರವಸೆ ಕೇವಲ ಮಾತಿನಲ್ಲಿ ಉಳಿದಿದೆಯೇ ಹೊರತು ಕಾರ್ಯರೂಪಕ್ಕೆ ಬಂದಿಲ್ಲ. ಶೈಕ್ಷಣಿಕ ಶುಲ್ಕಗಳನ್ನು ಪುನಾರಚಿಸುವವರೆಗೆ ಮುಷ್ಕರವನ್ನು ಮುಂದುವರಿಸಲಾಗುವುದು ಎಂದರು.
ಪ್ರತಿಭಟನೆಯನ್ನು ಸ್ಥಾನಿಕ ವೈದ್ಯರ ಸಂಘದ ಅಧ್ಯಕ್ಷ ಡಾ. ನವೀನ್ ಪ್ರಸಾದ್, ಪ್ರಮುಖರಾದ ಡಾ. ನಮೃತಾ ಡಾ. ಅವಿನಾಶ್ ಹಾಗೂ ಡಾ.ರಾಹುಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...