ವಿದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಹೊಸ ವೈರಸ್ ಒಮಿಕ್ರಾನ್ ನಿಯಂತ್ರಿಸಲು ರಾಜ್ಯ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ವಿದೇಶಗಳಿಂದ ಬಂದವರು ಕಡ್ಡಾಯವಾಗಿ ಆರ್ ಟಿಸಿ ಆರ್ ಟೆಸ್ಟ್ ಮಾಡಿಸಿಕೊಳ್ಳಬೇಕು. ನೆಗೆಟಿವ್ ವರದಿ ಬಂದರೂ ಏಳು ದಿನ ಮನೆಯಲ್ಲೇ ಕ್ವಾರೈಂಟನ್ ಆಗಬೇಕು ಎಂದು ಸೂಚಿಸಿದೆ.
ದೇಶದಲ್ಲಿ ಓಮಿಕ್ರಾನ್ ನ ಒಂದು ಪ್ರಕರಣವೂ ದಾಖಲಾಗಿಲ್ಲ. ಆದರೂ ಅಂತರಾಷ್ಟ್ರೀಯ ಪ್ರಯಾಣಿಕರ ತಪಾಸಣೆ, ಅವರಿಗೆ ಕೊರೊನಾ ದೃಢಪಟ್ಟರೆ ಜಿನೋಮ್ ಸೀಕ್ವೆನ್ಸಿಂಗ್ ಸೇರಿ ಹಲವು ರೀತಿಯಲ್ಲಿ ನಿಗಾ ಇಡಲು ಸೂಚಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವರಾದ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಲಸಿಕೆ ಪಡೆಯದ ಅವರಿಗೆ ಸರ್ಕಾರದ ಸವಲತ್ತು ನೀಡಬಾರದು. ಲಸಿಕೆ ಹಾಕಿಸಿಕೊಳ್ಳದವರಿಗೆ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶ ನಿರ್ಬಂಧಿಸಬೇಕು.
ಶಾಲಾ ಮಕ್ಕಳು, ಶಿಕ್ಷಕರಿಗೂ ಶೇ.5ರಷ್ಟು ಟೆಸ್ಟಿಂಗ್ ಮಾಡಿಸಬೇಕು.
ಲಾಕ್ ಡೌನ್ ಮಾಡದೇ ವೈರಸ್ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳಬೇಕು.
ಹೊಸ ವೈರಸ್ ಸೋಂಕಿತರ ಚಿಕಿತ್ಸೆಗೆ ಬೇಕಾದ ಆರೋಗ್ಯ ಸೌಲಭ್ಯ ಸಿದ್ಧಪಡಿಸಿಕೊಳ್ಳಬೇಕು ಎಂಬ ಸಲಹೆಗಳನ್ನು ಸರ್ಕಾರ ನೀಡಿದೆ.
ಮನ್ಸುಖ್ ಮಾಂಡವಿಯಾ ಅವರ ಹೇಳಿಕೆಯ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ
ಯಾವುದೇ ಪರಿಸ್ಥಿತಿ ಬಂದರೂ ಎದುರಿಸಲು ನಾವು ಸಜ್ಜಾಗಿದ್ದೇವೆ. ಲಾಕ್ ಡೌನ್ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.