Sunday, December 14, 2025
Sunday, December 14, 2025

ಬಿಸಿಯೂಟ ಶಿಕ್ಷಕರಿಗೆ ಬಿಸಿ ತುಪ್ಪ!

Date:

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿ ತಿಂಗಳಾಗಿದೆ. ಅದಕ್ಕೆ ಅನುದಾನದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗಾಗಿ ಅಕ್ಷರ ದಾಸೋಹ ಶಿಕ್ಷಕರ ಜೇಬಿಗೆ ಬಿಸಿಯಾಗಿದೆ. ಶಿಕ್ಷಕರು ಕೈಯಿಂದ ಹಣ ಹಾಕಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದಾರೆ.
ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಲು ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೆ ಕೊಡುವ ಹಣಕ್ಕೆ ತಕ್ಕದಾದ ಅನುದಾನವನ್ನು ನೀಡಬೇಕು. ಸರ್ಕಾರ ನೀಡುತ್ತಿರುವ ಅನುದಾನ ಏನೇನೂ ಸಾಲದು. ಬೆಲೆ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಸವರಾಜು ಸಂಗಪ್ಪ ನವರು ತಿಳಿಸಿದ್ದಾರೆ.
ಸರ್ಕಾರದ ಬಿಸಿಊಟದ ಲೆಕ್ಕಚಾರ ಶಿಕ್ಷಕರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆ ಹೊಡೆತ ಬಾಧಿಸುತ್ತಿದೆ. ತರಕಾರಿ ಸೇರಿದಂತೆ ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಸರ್ಕಾರ ಕೊಡುವ ಅಕ್ಷರ ದಾಸೋಹ ಅನುದಾನ ಯಾವುದಕ್ಕೂ ಸಾಲದಂತಾಗಿದೆ.
ಈಗ ಬಹುಪಾಲು ಬೇಳೆ ಬಂದಿದೆ. ಎಣ್ಣೆ ಕೂಡ ಸರಬರಾಜಾಗಿದೆ. ಉಪ್ಪು ಸದ್ಯದಲ್ಲೇ ಪೂರೈಕೆಯಾಗಲಿದೆ. ಕೆಲವೇ ದಿನಗಳಲ್ಲಿ ಎಲ್ಲೆಡೆ ಬಿಸಿ ಊಟಕ್ಕೆ ಬೇಕಾದ ಸಾಮಗ್ರಿಗಳು ಸಮರ್ಪಕವಾಗಿ ಸರಬರಾಜು ಆಗಲಿದೆ ಎಂದು ಚಿಕ್ಕಬಳ್ಳಾಪುರದ ಅಕ್ಷರ ದಾಸೋಹ ಅಧಿಕಾರಿಯಾದ ಶೈಲಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...