Thursday, February 19, 2026
Thursday, February 19, 2026

ಬಿಸಿಯೂಟ ಶಿಕ್ಷಕರಿಗೆ ಬಿಸಿ ತುಪ್ಪ!

Date:

ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಆರಂಭಿಸಿ ತಿಂಗಳಾಗಿದೆ. ಅದಕ್ಕೆ ಅನುದಾನದ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗಾಗಿ ಅಕ್ಷರ ದಾಸೋಹ ಶಿಕ್ಷಕರ ಜೇಬಿಗೆ ಬಿಸಿಯಾಗಿದೆ. ಶಿಕ್ಷಕರು ಕೈಯಿಂದ ಹಣ ಹಾಕಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುತ್ತಿದ್ದಾರೆ.
ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸಲು ಮಧ್ಯಾಹ್ನದ ಬಿಸಿಯೂಟ ನೀಡಲಾಗುತ್ತಿದೆ. ಆದರೆ ಕೊಡುವ ಹಣಕ್ಕೆ ತಕ್ಕದಾದ ಅನುದಾನವನ್ನು ನೀಡಬೇಕು. ಸರ್ಕಾರ ನೀಡುತ್ತಿರುವ ಅನುದಾನ ಏನೇನೂ ಸಾಲದು. ಬೆಲೆ ಏರಿಕೆಗೆ ಅನುಗುಣವಾಗಿ ಅನುದಾನ ಹೆಚ್ಚಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹ ಕಾರ್ಯದರ್ಶಿ ಬಸವರಾಜು ಸಂಗಪ್ಪ ನವರು ತಿಳಿಸಿದ್ದಾರೆ.
ಸರ್ಕಾರದ ಬಿಸಿಊಟದ ಲೆಕ್ಕಚಾರ ಶಿಕ್ಷಕರಿಗೆ ನುಂಗಲಾರದ ತುತ್ತಾಗಿದೆ. ಬೆಲೆ ಏರಿಕೆ ಹೊಡೆತ ಬಾಧಿಸುತ್ತಿದೆ. ತರಕಾರಿ ಸೇರಿದಂತೆ ಅಡುಗೆ ಸಾಮಗ್ರಿಗಳ ಬೆಲೆ ಗಗನಕ್ಕೇರಿದೆ. ಸರ್ಕಾರ ಕೊಡುವ ಅಕ್ಷರ ದಾಸೋಹ ಅನುದಾನ ಯಾವುದಕ್ಕೂ ಸಾಲದಂತಾಗಿದೆ.
ಈಗ ಬಹುಪಾಲು ಬೇಳೆ ಬಂದಿದೆ. ಎಣ್ಣೆ ಕೂಡ ಸರಬರಾಜಾಗಿದೆ. ಉಪ್ಪು ಸದ್ಯದಲ್ಲೇ ಪೂರೈಕೆಯಾಗಲಿದೆ. ಕೆಲವೇ ದಿನಗಳಲ್ಲಿ ಎಲ್ಲೆಡೆ ಬಿಸಿ ಊಟಕ್ಕೆ ಬೇಕಾದ ಸಾಮಗ್ರಿಗಳು ಸಮರ್ಪಕವಾಗಿ ಸರಬರಾಜು ಆಗಲಿದೆ ಎಂದು ಚಿಕ್ಕಬಳ್ಳಾಪುರದ ಅಕ್ಷರ ದಾಸೋಹ ಅಧಿಕಾರಿಯಾದ ಶೈಲಾ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

State Legal Services Authority ಡಾ.ಹರೀಶ್ ದೇಲಂತ ಬೆಟ್ಟು, ಈಗ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧಿಕಾರೇತರ ಸದಸ್ಯರು

State Legal Services Authority ರಾಜ್ಯ ಕಾನೂನು ಸೇವೆಗಳ ಪಾಧಿಕಾರದ ಅಧಿಕಾರೇತರ...

MESCOM ಶಿವಮೊಗ್ಗ ಗ್ರಾಮೀಣ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ.20 ರಂದು ಜನಸಂಪರ್ಕ ಸಭೆ

MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಬರುವಂತಹ ವಿದ್ಯುತ್ ಗ್ರಾಹಕರ...