Thursday, May 14, 2026
Thursday, May 14, 2026

ಸಾವಯವ ಮತ್ತು ಸಿರಿಧಾನ್ಯ ಮೇಳದ ಲಾಭ ಪಡೆಯಲು ಬಿ.ಸಿ.ಪಾಟೀಲ್ ಕರೆ

Date:

ಸಾವಯವ ಮತ್ತು ಸಿರಿಧಾನ್ಯ ಉತ್ಪಾದನೆಯೊಂದಿಗೆ ಜನರಿಗೆ ಆರೋಗ್ಯದ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಕೃಷಿ ಇಲಾಖೆ ಹಲವು‌ ಹೊಸಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ.
ಇದೀಗ ಅದರ ಮುಂದುವರೆದ ಭಾಗವಾಗಿ ರೈತೋತ್ಪಾದಕರು ಹಾಗೂ ಗ್ರಾಹಕರ ನಡುವೆ ಸಂಪರ್ಕ‌ ಏರ್ಪಡಿಸುವ ನಿಟ್ಟಿನಲ್ಲಿ
ಕೃಷಿ ಇಲಾಖೆ , ಕರ್ನಾಟಕ ಪ್ರದೇಶ ಕೃಷಿಕ ಸಮಾಜ ಹಾಗೂ ಕರ್ನಾಟಕ ಅಡಆತ ಸೇವೆ ಅಧಿಕಾರಿಗಳ ಸಂಘ ಸಹಯೋಗದೊಂದಿಗೆ ಸಾವಯವ ಹಾಗೂ ಸಿರಿಧಾನ್ಯ ಮೇಳ
ಹಮ್ಮಿಕೊಳ್ಳಲಾಗಿದೆ.


ಇದೇ ಶನಿವಾರ ಡಿ.4 ಮತ್ತು 5 ರಂದು ಎರಡು ದಿನಗಳ ಕಾಲ ಬೆಂಗಳೂರಿನ ಕೆ.ಎ.ಎಸ್ ಅಧಿಕಾರಿಗಳ ಸಂಘದಲ್ಲಿ ಮೇಳ ಆಯೋಜನೆಗೊಂಡಿದೆ.
ಸಾವಯವ ಮತ್ತು ಸಿರಿಧಾನ್ಯ ಮೇಳಕ್ಕೆ ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಉದ್ಘಾಟನೆ ನೆರವೇರಿಸಲಿದ್ದು, ಮೇಳದಲ್ಲಿ ಸಾವಯವ ಹಾಗೂ ಸಿರಿಧಾನ್ಯ ಬೆಳೆಯಲ್ಲಿ ಸಾಧನೆಗೈದ ಪ್ರಗತಿಪರ ರೈತರಿಂದ ವಿಚಾರ ವಿನಿಮಯ,ಸಾಯವವ ಸಿರಿಧಾನ್ಯ ಕೃಷಿಯ ಮಹತ್ವವನ್ನು ಸಾರಲಾಗುತ್ತಿದೆ.ಇದರೊಂದಿಗೆ ಮೇಳದಲ್ಲಿ ಈ ಉತ್ಪನ್ನಗಳ ವಸ್ತುಪ್ರದರ್ಶನ ಸಹ ಹಮ್ಮಿಕೊಳ್ಳಲಾಗಿದೆ.
ಸಾವಯವ ಪದಾರ್ಥಗಳನ್ನು ಉಪಯೋಗಿಸುವದರಿಂದ ಆಗುವ ಪ್ರಯೋಜನಗಳ ಬಗ್ಗೆ ಜನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಈ ಸಾವಯವ ಕೃಷಿಯಿಂದ ಸಿಗುವ ಪದಾರ್ಥಗಳು ನಮ್ಮ ಸದೃಢ ಮತ್ತು ಆರೋಗ್ಯ ಯುತ ಬದುಕು ನಿರ್ಮಾಣ ಮಾಡುವಲ್ಲಿ ಸಹಕಾರಿಯಾಗುತ್ತದೆ ಎನ್ನುವ ಬಯಕೆ ನಮ್ಮದು. ಆ ದಿಸೆಯಲ್ಲಿ ಆರೋಗ್ಯ ಔಷಧಿಗಾಗಿ ಮತ್ತು ದೇಹಕ್ಕೆ ಅತಿ ಉಪಯುಕ್ತ ಸಿರಿಧಾನ್ಯ ಮತ್ತು ದವಸ ಧಾನ್ಯ ಬೆಳೆಗಳ ಉಪಯೋಗದ ಬಗೆ ಮಾಹಿತಿ ನೀಡಲಾಗುತ್ತಿದೆ.ಅಲ್ಲದೆ ಇವುಗಳ ಕೃಷಿ ಬಳಕೆಯಿಂದ ಆಗುವ ಲಾಭಾಂಶದ ಕುರಿತು ಹೆಚ್ಚಿನ ಮಾಹಿತಿಯನ್ನು ನೀಡಲು ಹಂಚಿಕೊಳ್ಳಲು ಮೇಳ ಉಪಯುಕ್ತವಾಗಲಿದೆ.ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ಕುವೆಂಪು ವಿವಿಯಲ್ಲಿ ನಾಳೆಯಿಂದ ‘ಮಾನವ-ವನ್ಯಜೀವಿ ಸಂಘರ್ಷ’ ಕುರಿತು ರಾಷ್ಟ್ರೀಯ ಸಮ್ಮೇಳನ

Kuvempu University ಕುವೆಂಪು ವಿಶ್ವವಿದ್ಯಾಲಯದ ವನ್ಯಜೀವಿ ಮತ್ತು ನಿರ್ವಹಣಾ ಸ್ನಾತಕೋತ್ತರ ಅಧ್ಯಯನ...

Karnataka Sanga ಕರ್ನಾಟಕ ಸಂಘದಲ್ಲಿ ಇಬ್ಬರು ಹಿರಿಯ ಮಹನೀಯರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

Karnataka Sanga ಶಿವಮೊಗ್ಗ ಕರ್ನಾಟಕ ಸಂಘದಲ್ಲಿ ದಿನಾಂಕ 15 ಮೇ 2026ರ...

ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 𝗠𝗲𝘁𝗿𝗼 𝗖𝗼𝗮𝗰𝗵 ಗಳ ಖರೀದಿಗೆ 𝗜𝗖𝗙 ಜೊತೆ ಒಪ್ಪಂದ, ₹𝟭,𝟱𝟭𝟯.𝟳𝟱 ಕೋಟಿ ಮೊತ್ತದ ಕಾರ್ಯಾದೇಶ

ಬೆಂಗಳೂರು ನಗರದ ಸಂಚಾರ ದಟ್ಟಣೆಗೆ ಮುಕ್ತಿ ನೀಡಲಿರುವ ಬಹುನಿರೀಕ್ಷಿತ ಬೆಂಗಳೂರು ಉಪನಗರ...