ಸಂಚಾರ ನಿಯಮ ಉಲ್ಲಂಘಿಸುವವರ ಮನೆಬಾಗಿಲಿಗೆ ನೋಟಿಸ್ ಕಳುಹಿಸುತ್ತಿದ್ದ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದುವರಿದು ದಂಡ ಸಂಗ್ರಹಕ್ಕೆ ವಾಹನ ಮಾಲೀಕರ ಮನೆಗಳಿಗೆ ಹೋಗುತ್ತಿದ್ದಾರೆ.
ಆಟೋಮೇಷನ್ ಸೆಂಟರ್ ಮೂಲಕ ಫೋಟೋ ಕ್ಲಿಕ್ಕಿಸಿ ವಾಹನ ಮಾಲೀಕರ ಮನೆಗಳಿಗೆ ನೋಟಿಸ್ ಕಳಿಸಲಾಗುತ್ತಿದೆ. ಅದರಲ್ಲಿ ಬಹುಪಾಲು ಜನ ತಲೆಕೆಡಿಸಿಕೊಂಡಿಲ್ಲ. ಹೀಗಾಗಿ ಟ್ರಾಫಿಕ್ ಪೊಲೀಸರ ಮೂಲಕ ಅಂತವರ ಮನೆಗಳಿಗೆ ಭೇಟಿ ನೀಡಿ ದಂಡ ಸಂಗ್ರಹಿಸುವ ಕೆಲಸ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಟ್ರಾಫಿಕ್ ನಿಯಮಗಳ ಬಗ್ಗೆ ಜಾಗೃತಿ ಬರಲಿ ಎನ್ನುವುದೇ ಇದರ ಮೂಲ ಈಗಾಗಲೇ ನೋಟಿಸ್ ಬಂದವರು ವಿಳಂಬಮಾಡದೆ ದಂಡ ಪಾವತಿಸಿ ಎಂದು ಶಿವಮೊಗ್ಗದ ಎಸ್.ಪಿ. ಬಿ.ಎಂ. ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ.
ಕಳೆದ ಒಂದೂವರೆ ತಿಂಗಳುಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣೆ ಸಿಬ್ಬಂದಿ ಕೆಲಸ ಮಾಡುತ್ತಿದ್ದು ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಿದ್ದಾರೆ.
ವಾಹನ ಸವಾರರು ಟ್ರಿಬ್ಬಲ್ ರೈಡಿಂಗ್, ಹೆಲ್ಮೆಟ್ ಧರಿಸದೇ ವಾಹನ ಚಾಲನೆ, ಸಿಗ್ನಲ್ ನಿಯಮ ಉಲ್ಲಂಘನೆ, ಒನ್ ವೇ ಸಂಚಾರ ಹೀಗೆ ನಾನಾ ಬಗೆಯ ನಿಯಮ ಉಲ್ಲಂಘನೆ ಗಳನ್ನು ಮಾಡಿದ್ದಲ್ಲಿ ಅವರನ್ನು ಹಿಡಿದು ದಂಡ ವಿಧಿಸಲಾಗುತ್ತಿದೆ. ಈ ಬಗ್ಗೆ ಶೇ. 60ರಷ್ಟು ಜನ ತಲೆಕೆಡಿಸಿಕೊಂಡಿಲ್ಲ. ದಂಡವನ್ನು ಪಾವತಿ ಮಾಡಿಲ್ಲ. ಈ ಕಾರಣಕ್ಕಾಗಿ ಪೊಲೀಸರೇ ಖುದ್ದು ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಸಂಚಾರಿ ನಿಯಮ ಉಲ್ಲಂಘನೆ , ಮನೆಬಾಗಿಲಿಗೇ ನೋಟಿಸ್.!
Date: