Friday, March 20, 2026
Friday, March 20, 2026

ಅಕ್ರಮ ಮರಳು ಸಾಗಾಣಿಕೆ, ಅರಣ್ಯ ಇಲಾಖೆ ಎಚ್ಚರಿಕೆ.

Date:

ಹೊಸನಗರ ತಾಲ್ಲೂಕಿನ ಶರಾವತಿ ನದಿ ಯಲ್ಲಿ ದಿನನಿತ್ಯವೂ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ದಿನೇ ದಿನೇ ಕೇಳಿಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಶರಾವತಿ ನದಿ ಪಾತ್ರದ ವಿವಿಧೆಡೆ ಭೇಟಿ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಂ. ಆರ್. ಆದರ್ಶ ತಿಳಿಸಿದ್ದಾರೆ.

ತಾಲೂಕಿನಲ್ಲಿ , ಸೊನಲೆ ಮತ್ತು ತ್ರಿಣಿವೆ ಪಂಚಾಯಿತಿ ವ್ಯಾಪ್ತಿಯ ಶರಾವತಿ ನದಿ ಪಾತ್ರದಲ್ಲಿ ಮೊದಲು ಮುಳುಗಡೆ ನೀರು ಇಳಿಸಲಾಗಿತ್ತು. ನದಿಪಾತ್ರದ ವ್ಯಾಪಕವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೇರೆ ಮಾರ್ಗದಿಂದ ನದಿಗೆ ಹೋಗುವ ದಾರಿಗೆ ಟ್ರೆಂಚ್ ಹೊಡೆಯಲಾಗಿದೆ. ಅರಣ್ಯಾಧಿಕಾರಿಗಳು ನದಿ ಬಳಿ ಹೋಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇದಕ್ಕೂ ಮೀರಿ ಅಕ್ರಮ ಮರಳು ಸಾಗಾಣಿಕೆ ಮುಂದುವರೆದರೆ ವಾಹನಗಳ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಾಣಿಕೆಗೆ ಅವಕಾಶಮಾಡಿಕೊಡುವ ನದಿಪಾತ್ರದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಅಕ್ರಮಕ್ಕೆ ಸಹಾಯವನ್ನು ಮಾಡಿದರೆ ಮುಲಾಜಿಲ್ಲದೆ ದೂರನ್ನು ದಾಖಲಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಆರ್. ಆದರ್ಶ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...