Saturday, October 5, 2024
Saturday, October 5, 2024

ಅಕ್ರಮ ಮರಳು ಸಾಗಾಣಿಕೆ, ಅರಣ್ಯ ಇಲಾಖೆ ಎಚ್ಚರಿಕೆ.

Date:

ಹೊಸನಗರ ತಾಲ್ಲೂಕಿನ ಶರಾವತಿ ನದಿ ಯಲ್ಲಿ ದಿನನಿತ್ಯವೂ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ದಿನೇ ದಿನೇ ಕೇಳಿಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಶರಾವತಿ ನದಿ ಪಾತ್ರದ ವಿವಿಧೆಡೆ ಭೇಟಿ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಂ. ಆರ್. ಆದರ್ಶ ತಿಳಿಸಿದ್ದಾರೆ.

ತಾಲೂಕಿನಲ್ಲಿ , ಸೊನಲೆ ಮತ್ತು ತ್ರಿಣಿವೆ ಪಂಚಾಯಿತಿ ವ್ಯಾಪ್ತಿಯ ಶರಾವತಿ ನದಿ ಪಾತ್ರದಲ್ಲಿ ಮೊದಲು ಮುಳುಗಡೆ ನೀರು ಇಳಿಸಲಾಗಿತ್ತು. ನದಿಪಾತ್ರದ ವ್ಯಾಪಕವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೇರೆ ಮಾರ್ಗದಿಂದ ನದಿಗೆ ಹೋಗುವ ದಾರಿಗೆ ಟ್ರೆಂಚ್ ಹೊಡೆಯಲಾಗಿದೆ. ಅರಣ್ಯಾಧಿಕಾರಿಗಳು ನದಿ ಬಳಿ ಹೋಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇದಕ್ಕೂ ಮೀರಿ ಅಕ್ರಮ ಮರಳು ಸಾಗಾಣಿಕೆ ಮುಂದುವರೆದರೆ ವಾಹನಗಳ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಾಣಿಕೆಗೆ ಅವಕಾಶಮಾಡಿಕೊಡುವ ನದಿಪಾತ್ರದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಅಕ್ರಮಕ್ಕೆ ಸಹಾಯವನ್ನು ಮಾಡಿದರೆ ಮುಲಾಜಿಲ್ಲದೆ ದೂರನ್ನು ದಾಖಲಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಆರ್. ಆದರ್ಶ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Chennabasappa ಬನ್ನಿ ಪೂಜೆಗೆ ಶಾಸಕ ಚೆನ್ನಿ ಅವರಿಂದ ಪೂರ್ವೋಚಿತ ಸಿದ್ಧತೆ

S.N.Chennabasappa ನವರಾತ್ರಿ ಉತ್ಸವದ ಕಡೆಯ ದಿನದಂದು ನಗರದ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ...

Shree Sigandur Chowdeshwari Temple ಸಿಗಂದೂರು ದೇವಿ ವೈಭವದ ನವರಾತ್ರಿ ಉತ್ಸವ

Shree Sigandur Chowdeshwari Temple ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ...

Madhu Bangarappa ಸಾರ್ವಜನಿಕರ ಅಹವಾಲುಗಳಿಗೆ ಸಕಾಲದಲ್ಲಿ ಅಗತ್ಯ ಸೌಲಭ್ಯ ಒದಗಿಸಿ- ಮಧು ಬಂಗಾರಪ್ಪ

Madhu Bangarappa ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು...

CM Siddharamaiah ಚಾಮುಂಡೇಶ್ವರಿ ಆಶೀರ್ವಾದದಿಂದಲೇ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದೇನೆ- ಸಿದ್ಧರಾಮಯ್ಯ

CM Siddharamaiah ತಾಯಿ ಚಾಮುಂಡೇಶ್ವರಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ...