Saturday, December 6, 2025
Saturday, December 6, 2025

ಅಕ್ರಮ ಮರಳು ಸಾಗಾಣಿಕೆ, ಅರಣ್ಯ ಇಲಾಖೆ ಎಚ್ಚರಿಕೆ.

Date:

ಹೊಸನಗರ ತಾಲ್ಲೂಕಿನ ಶರಾವತಿ ನದಿ ಯಲ್ಲಿ ದಿನನಿತ್ಯವೂ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ದಿನೇ ದಿನೇ ಕೇಳಿಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಶರಾವತಿ ನದಿ ಪಾತ್ರದ ವಿವಿಧೆಡೆ ಭೇಟಿ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಂ. ಆರ್. ಆದರ್ಶ ತಿಳಿಸಿದ್ದಾರೆ.

ತಾಲೂಕಿನಲ್ಲಿ , ಸೊನಲೆ ಮತ್ತು ತ್ರಿಣಿವೆ ಪಂಚಾಯಿತಿ ವ್ಯಾಪ್ತಿಯ ಶರಾವತಿ ನದಿ ಪಾತ್ರದಲ್ಲಿ ಮೊದಲು ಮುಳುಗಡೆ ನೀರು ಇಳಿಸಲಾಗಿತ್ತು. ನದಿಪಾತ್ರದ ವ್ಯಾಪಕವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೇರೆ ಮಾರ್ಗದಿಂದ ನದಿಗೆ ಹೋಗುವ ದಾರಿಗೆ ಟ್ರೆಂಚ್ ಹೊಡೆಯಲಾಗಿದೆ. ಅರಣ್ಯಾಧಿಕಾರಿಗಳು ನದಿ ಬಳಿ ಹೋಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇದಕ್ಕೂ ಮೀರಿ ಅಕ್ರಮ ಮರಳು ಸಾಗಾಣಿಕೆ ಮುಂದುವರೆದರೆ ವಾಹನಗಳ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಾಣಿಕೆಗೆ ಅವಕಾಶಮಾಡಿಕೊಡುವ ನದಿಪಾತ್ರದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಅಕ್ರಮಕ್ಕೆ ಸಹಾಯವನ್ನು ಮಾಡಿದರೆ ಮುಲಾಜಿಲ್ಲದೆ ದೂರನ್ನು ದಾಖಲಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಆರ್. ಆದರ್ಶ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...