Monday, July 27, 2026
Monday, July 27, 2026

ಅಕ್ರಮ ಮರಳು ಸಾಗಾಣಿಕೆ, ಅರಣ್ಯ ಇಲಾಖೆ ಎಚ್ಚರಿಕೆ.

Date:

ಹೊಸನಗರ ತಾಲ್ಲೂಕಿನ ಶರಾವತಿ ನದಿ ಯಲ್ಲಿ ದಿನನಿತ್ಯವೂ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ದಿನೇ ದಿನೇ ಕೇಳಿಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಶರಾವತಿ ನದಿ ಪಾತ್ರದ ವಿವಿಧೆಡೆ ಭೇಟಿ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಂ. ಆರ್. ಆದರ್ಶ ತಿಳಿಸಿದ್ದಾರೆ.

ತಾಲೂಕಿನಲ್ಲಿ , ಸೊನಲೆ ಮತ್ತು ತ್ರಿಣಿವೆ ಪಂಚಾಯಿತಿ ವ್ಯಾಪ್ತಿಯ ಶರಾವತಿ ನದಿ ಪಾತ್ರದಲ್ಲಿ ಮೊದಲು ಮುಳುಗಡೆ ನೀರು ಇಳಿಸಲಾಗಿತ್ತು. ನದಿಪಾತ್ರದ ವ್ಯಾಪಕವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೇರೆ ಮಾರ್ಗದಿಂದ ನದಿಗೆ ಹೋಗುವ ದಾರಿಗೆ ಟ್ರೆಂಚ್ ಹೊಡೆಯಲಾಗಿದೆ. ಅರಣ್ಯಾಧಿಕಾರಿಗಳು ನದಿ ಬಳಿ ಹೋಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇದಕ್ಕೂ ಮೀರಿ ಅಕ್ರಮ ಮರಳು ಸಾಗಾಣಿಕೆ ಮುಂದುವರೆದರೆ ವಾಹನಗಳ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಾಣಿಕೆಗೆ ಅವಕಾಶಮಾಡಿಕೊಡುವ ನದಿಪಾತ್ರದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಅಕ್ರಮಕ್ಕೆ ಸಹಾಯವನ್ನು ಮಾಡಿದರೆ ಮುಲಾಜಿಲ್ಲದೆ ದೂರನ್ನು ದಾಖಲಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಆರ್. ಆದರ್ಶ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka State Brahmin Development Board ವಿಪ್ರ ಸ್ವ- ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

Karnataka State Brahmin Development Board ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

Rotary Club of Shivamogga ವೈದ್ಯರು ಉಚಿತವಾಗಿ ನೀಡುವ ಸಲಹಾ ಸೌಲಭ್ಯ ಬಳಸಿಕೊಳ್ಳಿ- ಎನ್.ಗೋಪಿನಾಥ್

Rotary Club of Shivamogga ವೈದ್ಯರು ಉಚಿತವಾಗಿ ನೀಡುತ್ತಿರುವ ಸಲಹೆಗಳನ್ನು ಬಳಸಿಕೊಳ್ಳಿ...

Klive Special Article ತೆರಿಗೆಯು ಜೇನ್ನೊಣವು ಹೂವಿನಿಂದ ಜೇನು ಸಂಗ್ರಹಿಸುವಂತೆ ಇರಬೇಕು

ವಿಶೇಷ ಲೇಖನ: ಆರ್.ಮನೋಹರ್.ತೆರಿಗೆ ಸಲಹೆಗಾರ. ಶಿವಮೊಗ್ಗ. Klive Special Article ಆದಾಯ ತೆರಿಗೆ...