Thursday, May 14, 2026
Thursday, May 14, 2026

ಅಕ್ರಮ ಮರಳು ಸಾಗಾಣಿಕೆ, ಅರಣ್ಯ ಇಲಾಖೆ ಎಚ್ಚರಿಕೆ.

Date:

ಹೊಸನಗರ ತಾಲ್ಲೂಕಿನ ಶರಾವತಿ ನದಿ ಯಲ್ಲಿ ದಿನನಿತ್ಯವೂ ಅಕ್ರಮ ಮರಳು ಸಾಗಾಣಿಕೆ ನಡೆಯುತ್ತಿದೆ ಎಂಬ ಬಗ್ಗೆ ದೂರುಗಳು ದಿನೇ ದಿನೇ ಕೇಳಿಬರುತ್ತಿವೆ. ಈ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿದೆ. ಶರಾವತಿ ನದಿ ಪಾತ್ರದ ವಿವಿಧೆಡೆ ಭೇಟಿ ನೀಡಿ ಎಚ್ಚರಿಕೆ ನೀಡಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಎಂ. ಆರ್. ಆದರ್ಶ ತಿಳಿಸಿದ್ದಾರೆ.

ತಾಲೂಕಿನಲ್ಲಿ , ಸೊನಲೆ ಮತ್ತು ತ್ರಿಣಿವೆ ಪಂಚಾಯಿತಿ ವ್ಯಾಪ್ತಿಯ ಶರಾವತಿ ನದಿ ಪಾತ್ರದಲ್ಲಿ ಮೊದಲು ಮುಳುಗಡೆ ನೀರು ಇಳಿಸಲಾಗಿತ್ತು. ನದಿಪಾತ್ರದ ವ್ಯಾಪಕವಾಗಿ ಮರುಳು ಸಾಗಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಗ್ರಾಮಸ್ಥರಿಂದ ಸಾಕಷ್ಟು ದೂರುಗಳು ಬಂದಿವೆ.ಈ ಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೇರೆ ಮಾರ್ಗದಿಂದ ನದಿಗೆ ಹೋಗುವ ದಾರಿಗೆ ಟ್ರೆಂಚ್ ಹೊಡೆಯಲಾಗಿದೆ. ಅರಣ್ಯಾಧಿಕಾರಿಗಳು ನದಿ ಬಳಿ ಹೋಗಿ ಎಚ್ಚರಿಕೆಯನ್ನು ನೀಡಲಾಗಿದೆ. ಇದಕ್ಕೂ ಮೀರಿ ಅಕ್ರಮ ಮರಳು ಸಾಗಾಣಿಕೆ ಮುಂದುವರೆದರೆ ವಾಹನಗಳ ಮಾಲೀಕರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಅಕ್ರಮ ಮರಳು ಸಾಗಾಣಿಕೆಗೆ ಅವಕಾಶಮಾಡಿಕೊಡುವ ನದಿಪಾತ್ರದ ನಿವಾಸಿಗಳಿಗೂ ಸಹ ಎಚ್ಚರಿಕೆ ನೀಡಲಾಗಿದೆ. ಅಕ್ರಮಕ್ಕೆ ಸಹಾಯವನ್ನು ಮಾಡಿದರೆ ಮುಲಾಜಿಲ್ಲದೆ ದೂರನ್ನು ದಾಖಲಿಸಲಾಗುವುದು ಎಂದು ವಲಯ ಅರಣ್ಯಾಧಿಕಾರಿ ಎಂ.ಆರ್. ಆದರ್ಶ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...