Tuesday, March 24, 2026
Tuesday, March 24, 2026

ಲಿಖಿತ ಭರವಸೆ ಕೊಟ್ಟರೆ ಮಾತ್ರ ಪ್ರತಿಭಟನೆ ವಾಪಸ್

Date:

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಕಾನೂನು ಬೆಂಬಲ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಹಠ ಹಿಡಿದಿದ್ದ ರೈತ ಸಂಘಟನೆಗಳು ಈಗ ಪಟ್ಟನ್ನು ಕೊಂಚ ಸಡಿಲಿಸಿವೆ. ತಮ್ಮ ಇತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ಹಿಂಪಡೆಯಬಹುದು ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ.
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಧೇಯಕವನ್ನು ಸಂಸತ್ ನಲ್ಲಿ ಅಂಗೀಕರಿಸಿರುವ ಕೇಂದ್ರ ಸರಕಾರವು ಈಗ ರೈತ ಸಂಘಟನೆಗಳ ಜೊತೆ ಮಾತುಕತೆಗೆ ಮುಂದಾಗಿದೆ. ಪ್ರತಿಭಟನಾನಿರತ 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಸ್ಪಷ್ಟಪಡಿಸಿದೆ.
ಕೇಂದ್ರದಿಂದ ಪಂಜಾಬ್ ರೈತ ಒಕ್ಕೂಟದ ನಾಯಕರಿಗೆ ಕರೆ ಬಂದಿದೆ. ರೈತರ ಬೇಡಿಕೆ ಈಡೇರಿಸುವುದು, ಸಮಸ್ಯೆ ಬಗೆಹರಿಸುವ ಕುರಿತು ರಚಿಸಲಿರುವ ಸಮಿತಿಗೆ ಎಸ್ ಕೆಎಂ ನ ಐವರು ಸದಸ್ಯರ ಹೆಸರು ತಿಳಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದೆ.
ಸರಕಾರ ರಚಿಸುವ ಸಮಿತಿಯಲ್ಲಿ ಯಾರಿದ್ದಾರೆ? ಯಾವ ಉದ್ದೇಶಕ್ಕಾಗಿ ಸಮಿತಿ ರಚಿಸಲಾಗುತ್ತಿದೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅದರಲ್ಲೂ, ಇದರ ಕುರಿತು ಲಿಖಿತ ಮಾಹಿತಿಯನ್ನು ಒದಗಿಸಿಲ್ಲ. ಹಾಗಾಗಿ ಇದುವರೆಗೆ ನಾವು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

Manasadhara Trust ಸರ್ಕಾರಿ ಶಾಲಾ ಮಕ್ಕಳಿಗಾಗಿ ಮನಃಸ್ಫೂರ್ತಿ ಬೇಸಿಗೆ ಶಿಬಿರ

Manasadhara Trust ಮಾನಸಾಧಾರ ಟ್ರಸ್ಟ್(ರಿ), ಮನಃಸ್ಫೂರ್ತಿ ವಿಶೇಷ ಶಾಲೆ(ರಿ) ಮತ್ತು ಕಲಿಕಾ...

India Scouts and Guides ರಸ್ತೆ ಸಂಚಾರ ನಿಯಮಗಳನ್ನು ಪ್ರತಿಯೊಬ್ಬರೂ ಪಾಲಿಸಿ

India Scouts and Guides ಸಮಾಜದ ಪ್ರತಿಯೊಬ್ಬರೂ ರಸ್ತೆ ಸಂಚಾರ ನಿಯಮಗಳನ್ನು...