Friday, October 4, 2024
Friday, October 4, 2024

ಲಿಖಿತ ಭರವಸೆ ಕೊಟ್ಟರೆ ಮಾತ್ರ ಪ್ರತಿಭಟನೆ ವಾಪಸ್

Date:

ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆ ಕಾನೂನು ಬೆಂಬಲ ನೀಡುವವರೆಗೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ ಎಂದು ಹಠ ಹಿಡಿದಿದ್ದ ರೈತ ಸಂಘಟನೆಗಳು ಈಗ ಪಟ್ಟನ್ನು ಕೊಂಚ ಸಡಿಲಿಸಿವೆ. ತಮ್ಮ ಇತರ ಬೇಡಿಕೆಗಳ ಕುರಿತು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೆ ಪ್ರತಿಭಟನೆ ಹಿಂಪಡೆಯಬಹುದು ಎಂಬ ಮಾಹಿತಿಯನ್ನು ಮೂಲಗಳು ತಿಳಿಸಿವೆ.
ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆಯುವ ವಿಧೇಯಕವನ್ನು ಸಂಸತ್ ನಲ್ಲಿ ಅಂಗೀಕರಿಸಿರುವ ಕೇಂದ್ರ ಸರಕಾರವು ಈಗ ರೈತ ಸಂಘಟನೆಗಳ ಜೊತೆ ಮಾತುಕತೆಗೆ ಮುಂದಾಗಿದೆ. ಪ್ರತಿಭಟನಾನಿರತ 40 ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾ ಇದನ್ನು ಸ್ಪಷ್ಟಪಡಿಸಿದೆ.
ಕೇಂದ್ರದಿಂದ ಪಂಜಾಬ್ ರೈತ ಒಕ್ಕೂಟದ ನಾಯಕರಿಗೆ ಕರೆ ಬಂದಿದೆ. ರೈತರ ಬೇಡಿಕೆ ಈಡೇರಿಸುವುದು, ಸಮಸ್ಯೆ ಬಗೆಹರಿಸುವ ಕುರಿತು ರಚಿಸಲಿರುವ ಸಮಿತಿಗೆ ಎಸ್ ಕೆಎಂ ನ ಐವರು ಸದಸ್ಯರ ಹೆಸರು ತಿಳಿಸುವಂತೆ ಕೋರಲಾಗಿದೆ ಎಂದು ಮಾಹಿತಿ ನೀಡಿದೆ.
ಸರಕಾರ ರಚಿಸುವ ಸಮಿತಿಯಲ್ಲಿ ಯಾರಿದ್ದಾರೆ? ಯಾವ ಉದ್ದೇಶಕ್ಕಾಗಿ ಸಮಿತಿ ರಚಿಸಲಾಗುತ್ತಿದೆ ಎಂಬ ಕುರಿತು ಇದುವರೆಗೆ ಮಾಹಿತಿ ಲಭ್ಯವಾಗಿಲ್ಲ. ಅದರಲ್ಲೂ, ಇದರ ಕುರಿತು ಲಿಖಿತ ಮಾಹಿತಿಯನ್ನು ಒದಗಿಸಿಲ್ಲ. ಹಾಗಾಗಿ ಇದುವರೆಗೆ ನಾವು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಒಕ್ಕೂಟ ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9...

Department of Parliamentary Affairs and Legislation ಅಕ್ಟೋಬರ್ 5 ರಂದು ನಡೆಯುವ “ಯುವ ಸಂಸತ್” ಸ್ಥಳ‌ ಬದಲಾವಣೆ ಗಮನಿಸಿ

Department of Parliamentary Affairs and Legislation ಸಂಸದೀಯ ಮತ್ತು ವ್ಯವಹಾರಗಳು...

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ...

Shivamogga Dasara ಶಿವಮೊಗ್ಗ ಚಲನಚಿತ್ರ ದಸರಾ ಚಾಲನೆಗೆ ಹಿರಿಯ ನಟಿ ಉಮಾಶ್ರೀ ಆಗಮನ

Shivamogga Dasara ಶಿವಮೊಗ್ಗ ಮಹಾ ನಗರ ಪಾಲಿಕೆ ವತಿಯಿಂದ ಆಯೋಜಿಸಲಾಗಿರುವ...