ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನವೆಂಬರ್ 29ರಿಂದ ಆರಂಭಗೊಂಡಿದೆ. ಲಕ್ಷದೀಪೋತ್ಸವದ ಅಂಗವಾಗಿ ಪ್ರತಿ ದಿನವು ಒಂದೊಂದು ವಿಶೇಷತೆಗಳಿಂದ ಧರ್ಮಸ್ಥಳ ಕ್ಷೇತ್ರ ವಿಜೃಂಭಿಸಲಿದೆ.
ಧರ್ಮಸ್ಥಳ ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ ಹಾಗೂ ಲಲಿತೋದ್ಯಾನ ಉತ್ಸವ ಅದ್ದೂರಿಯಾಗಿ ನೆರವೇರಿತು. ಬರುತ್ತಿದ್ದಂತಹ ಭಕ್ತರು ದೇವತಾ ಮೂರ್ತಿಯನ್ನು ಕಂಡು ಭಕ್ತಿ ಪರವಶಕ್ಕೊಳಗಾದರು.
ಶ್ರೀ ಮಂಜುನಾಥ ಸ್ವಾಮಿಯ ವಿಗ್ರಹವನ್ನು ಬೆಳ್ಳಿರಥೋತ್ಸವ ಅದ್ದೂರಿಯಾಗಿ ಜರುಗಿದೆ. ಪ್ರತಿವರ್ಷವೂ ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ, ಹೊರರಾಜ್ಯಗಳು ಮತ್ತು ದೇಶ-ವಿದೇಶಗಳಿಂದ ಭಕ್ತರು ಆಗಮಿಸುತ್ತಾರೆ. ಈ ಬಾರಿಯೂ ಕೂಡ ಲಕ್ಷ ದೀಪೋತ್ಸವವನ್ನು ಸಂತೋಷದಿಂದ ಕಣ್ತುಂಬಿ ಕೊಳ್ಳುತ್ತಿದ್ದಾರೆ.
ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಲಕ್ಷದೀಪೋತ್ಸವದಲ್ಲಿ ಭಾಗಿಯಾಗಿದ್ದರು.