Thursday, August 13, 2026
Thursday, August 13, 2026

ಆಟೋ, ವ್ಯಾನ್ ಚಾಲಕರು ನಿಯಮ ಉಲ್ಲಂಘಿಸುವಂತಿಲ್ಲ

Date:

ಯಾವುದೇ ವಾಹನ ಚಾಲಕ ಮಕ್ಕಳನ್ನು ಶಾಲೆಗೆ ಕರೆದೊಯ್ಯುವಾಗ ಮತ್ತು ಮಕ್ಕಳನ್ನು ಕರೆ ತರುವಾಗ ಕೋವಿಡ್ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿದರೆ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸುತ್ತಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.
ಇತ್ತೀಚೆಗೆ ಕರ್ನಾಟಕದಲ್ಲಿ ಐಚ್ಛಿಕ ಆಫ್‌ಲೈನ್ ತರಗತಿಗಳು ಪ್ರಾರಂಭವಾದ ನಂತರ ಖಾಸಗಿ ಮತ್ತು ಶಾಲಾ ವಾಹನಗಳ ಸುರಕ್ಷತೆಯ ಕೊರತೆಯ ಬಗ್ಗೆ ದೂರುಗಳು ಜಿಲ್ಲೆಯ ಅಧಿಕಾರಿಗಳ ಮುಂದೆ ಸಂಗ್ರಹವಾಗಿವೆ.
ಇದು ತಮ್ಮ ಮಕ್ಕಳನ್ನು ತರಗತಿಗಳಿಗೆ ಕಳುಹಿಸಲು ಒಪ್ಪಿಕೊಂಡಿರುವ ಪೋಷಕರಿಗೆ ತಲೆನೋವಾಗಿ ಪರಿಣಮಿಸಿದೆ. ಶಾಲೆಗಳಿಗೆ ಐದರಿಂದ ಆರು ವಿದ್ಯಾರ್ಥಿಗಳನ್ನು ಆಟೋಗಳಲ್ಲಿ ಕರೆದೊಯ್ಯುವುದು ಅಥವಾ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಣ್ಣ ವ್ಯಾನ್‌ಗಳಲ್ಲಿ ಕರೆದುಕೊಂಡು ಹೋಗುವುದು ಒಳ್ಳೆಯ ವಿಚಾರ. ಆದರೆ, ಆಟೋಗಳಲ್ಲಿ ಮತ್ತು ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ವಾಹನಗಳಲ್ಲಿ ಒಂದೇ ಬಾರಿಗೆ ಬಹಳಷ್ಟು ಮಂದಿಯನ್ನು ಕರೆದೊಯ್ಯುವುದು ಸಾಮಾನ್ಯವಾಗಿಬಿಟ್ಟಿದೆ. ಈ ವರ್ಷ, ಕೋವಿಡ್ ಕಾರಣದಿಂದ ಶಾಲಾ ಬಸ್ ಶುಲ್ಕವನ್ನು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ, ಪಾಲಕರು ಆಟೋಗಳು ಮತ್ತು ಖಾಸಗಿ ವಾಹನಗಳ ಮೊರೆ ಹೋಗಿವೆ.
ಆದರೆ ಆಟೋ ಚಾಲಕರು ಹಾಗೂ ಖಾಸಗಿ ವಾಹನ ಚಾಲಕರು ದೈಹಿಕ ಅಂತರದಂತಹ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಮೈಸೂರು ನಗರದ ನಾಗರತ್ನ ಸಿದ್ಧಯ್ಯ ಅವರು ತಿಳಿಸಿದ್ದಾರೆ.
ಬಹುಪಾಲು ಶಾಲೆಗಳು ಕೆಎಸ್‌ಆರ್‌ಟಿಸಿ ಬಸ್ ಸೇವೆಗಳನ್ನು ಹೊಂದಿಲ್ಲ. ಅವರು ಖಾಸಗಿ ವಾಹನಗಳನ್ನು ಬಳಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಆಟೋ ಚಾಲಕರಾದ ಶಶಿಧರ್ ಅವರು, ದೈಹಿಕ ಅಂತರವನ್ನು ಕಾಪಾಡುತ್ತಾ, ಪ್ರತಿ ಬಾರಿಗೆ ಕೇವಲ 3 -4 ಮಕ್ಕಳನ್ನು ಕರೆದೊಯ್ಯವುದು ಕಷ್ಟಕರವಾಗುತ್ತದೆ. ಈಗ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಹೆಚ್ಚಾಗಿದೆ. ಪೋಷಕರು ಹೆಚ್ಚು ಹಣ ನೀಡಲು ಒಪ್ಪುವುದಿಲ್ಲ. ಇದು ಆರ್ಥಿಕವಾಗಿ ಲಾಭದಾಯಕವಲ್ಲ. ನಮಗೂ ಯಾವುದೇ ಬೇರೆ ಮಾರ್ಗಗಳಿಲ್ಲ ಎಂದು ಹೇಳಿದ್ದಾರೆ.
ಈ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಜಿಲ್ಲಾಧಿಕಾರಿ ಬಗಾದಿ ಗೌತಮ್ ತಿಳಿಸಿದ್ದಾರೆ. ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದೊಯ್ಯುವ ಕುರಿತು ಡಿಸಿಪಿ ಮತ್ತು ಆರ್‌ಟಿಒ ಅಧಿಕಾರಿಗಳೊಂದಿಗೆ ಮಾತನಾಡಿದ್ದೇನೆ. ಪೋಷಕರೂ ಜಾಗರೂಕರಾಗಿರಬೇಕು. ಆಟೋ ಮತ್ತು ವ್ಯಾನ್‌ಗಳ ಚಾಲಕರನ್ನು ಭೇಟಿ ಮಾಡುವುದರ ಜೊತೆಗೆ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಲು ನಾವು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಕಾಲಮಿತಿಯಲ್ಲಿ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು. ಹಲವಾರು ಶಾಲೆಗಳು ಆನ್‌ಲೈನ್ ತರಗತಿಗಳನ್ನು ಸ್ಥಗಿತಗೊಳಿಸಿವೆ ಮತ್ತು ಆಫ್‌ಲೈನ್ ತರಗತಿಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅನೇಕ ಪೋಷಕರು ಸರ್ಕಾರಕ್ಕೆ ದೂರು ನೀಡಿದ್ದಾರೆ.ಆದರೂ ಇದು ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದೆ. ಪೋಷಕರು ದೂರು ನೀಡಿದರೆ ಶಿಕ್ಷಣ ಇಲಾಖೆ ಮೂಲಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...