Tuesday, April 21, 2026
Tuesday, April 21, 2026

ಅರಣ್ಯ ಹಕ್ಕು ಕಾಯ್ದೆ ಫಲಾನುಭವಿಗಳು ,ಪರಿಹಾರ ವಂಚಿತರು

Date:

ಸಾಲ ಸೌಲಭ್ಯದಿಂದ ವಂಚಿತರಾಗುತ್ತಿದ್ದ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ಪಡೆದ ಫಲಾನುಭವಿಗಳು, ಬೆಳೆ ನಷ್ಟದ ಪರಿಹಾರದಿಂದಲೂ ವಂಚಿತರಾಗಿದ್ದಾರೆ. ಜಿಲ್ಲಾದ್ಯಂತ ಅಕಾಲಿಕ ಮಳೆಯಿಂದ ಕಾಫಿ, ಕಾಳುಮೆಣಸು, ಭತ್ತ, ಅಡಿಕೆ ಸೇರಿದಂತೆ ಬೆಳೆ ನಷ್ಟ ಅನುಭವಿಸಿರುವ ಈ ಫಲಾನುಭವಿಗಳು ಎನ್ ಡಿಆರ್ ಎಫ್ ಪರಿಹಾರವೂ ಸಿಗದೆ ಪರದಾಡುವಂತಾಗಿದೆ.
ಅಕಾಲಿಕ ಮಳೆಯಿಂದ ಬೆಳೆ ನಷ್ಟವಾಗಿದೆ. ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕುಪತ್ರ ಪಡೆದುಕೊಂಡವರಿಗೆ ಪಹಣಿ ಸಮಸ್ಯೆಯಿಂದ ಬೆಳೆ ಪರಿಹಾರ ಸಿಗದಂತೆ ಯಾವ ಸೌಲಭ್ಯವೂ ಸಿಗುತ್ತಿಲ್ಲ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಸಮಸ್ಯೆ ಪರಿಹರಿಸಬೇಕು ಎಂದು ಕಳಸದ ಬುಡಕಟ್ಟು ರೈತ ಉತ್ಪಾದಕರ ಸಂಘದ ಕಾರ್ಯದರ್ಶಿ ಸುರೇಶ್ ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ಅಧಿನಿಯಮ 2006 ಮತ್ತು ನಿಯಮ 2008, ತಿದ್ದುಪಡಿ ನಿಯಮ 2012 ರ ಪ್ರಕಾರ ಪರಿಶಿಷ್ಟ ಪಂಗಡ ಇತರೆ ಪಾರಂಪರಿಕ ಅರಣ್ಯವಾಸಿಗಳು 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯದಲ್ಲಿ ವಾಸ ಅಥವಾ ಜೀವನೋಪಾಯಕ್ಕೆ ಅರಣ್ಯ ಪ್ರದೇಶದ ಮೇಲೆ ಅವಲಂಬಿತರಾಗಿದ್ದರೆ ಅರಣ್ಯ ಹಕ್ಕು ಪಡೆಯಲು ಅರ್ಹತೆ ಪಡೆದಿದ್ದರು.
ಅರಣ್ಯ ಹಕ್ಕು ಕಾಯ್ದೆಯಡಿ ಮಂಜೂರಾಗಿರುವ ಜಮೀನಿಗೆ ಬ್ಯಾಂಕುಗಳು ಕೃಷಿ ಸಾಲವನ್ನೂ ನೀಡುತ್ತಿಲ್ಲ. ಸರ್ಕಾರವೇ ಮಂಜೂರು ಮಾಡಿಕೊಟ್ಟಿರುವ ಈ ಭೂಮಿಗೆ ಹಕ್ಕುಪತ್ರ ಕೊಟ್ಟಿರುವುದು ಬಿಟ್ಟರೆ ಬಹುತೇಕ ಪ್ರಕರಣಗಳಲ್ಲಿ ಪಹಣಿ, ಖಾತೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೊಟ್ಟಿಲ್ಲ. ಇಂತಹ ದಾಖಲೆಗಳಿಲ್ಲದ ಕಾರಣ ಸಾಲ ಸೌಲಭ್ಯದಿಂದಲೂ ಫಲಾನುಭವಿಗಳು ವಂಚಿತರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಅರಣ್ಯ ಹಕ್ಕು ಕಾಯಿದೆಯಡಿ ನೀಡಿರುವ ಹಕ್ಕುಪತ್ರದಲ್ಲಿ ಸಿಗುವ ಪಹಣಿ ಆನ್ ಲೈನ್ ನಲ್ಲಿ ಫೀಡ್ ಆಗುತ್ತಿಲ್ಲ. ಬೆಳೆ ಹಾನಿ ಆಗಿರುವ ಇಂತಹ ರೈತರು ಅರ್ಜಿ ಸಲ್ಲಿಸಿದರೆ ಅರ್ಜಿಗಳನ್ನು ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಸಲ್ಲಿಸಲಾಗುವುದು ಎಂದು ಕಳಸದ ನಾಡಕಛೇರಿ ಕಂದಾಯ ನಿರೀಕ್ಷಕರಾದ ಅಜ್ಜೇಗೌಡ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಕ್ರಾಂತಿಕಾರಿ ಬಸವಣ್ಣನವರ ದಾರಿಯಲ್ಲಿ ಸಾಗುವ ಸಂಕಲ್ಪ ಮಾಡೋಣ- ಬಿ.ವೈ.ರಾಘವೇಂದ್ರ

B.Y. Raghavendra ಕಾಯಕ- ದಾಸೋಹ ಮತ್ತು ಸಾಮಾಜಿಕ ನ್ಯಾಯದ ತತ್ವಗಳನ್ನು ಸಾರಿದ...

Bharat Scouts and Guides ಕೃಷಿ ಕ್ಷೇತ್ರ ಮಾಹಿತಿಯಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗಲು ಸಾಧ್ಯ- ಕೆ.ರವಿ

Bharat Scouts and Guides ಕೃಷಿ ಕ್ಷೇತ್ರದಲ್ಲಿ ಆಗುತ್ತಿರುವ ಪ್ರಗತಿಯ ಬಗ್ಗೆ...

Klive special Article “ಶಂಕರಂ ಲೋಕ ಶಂಕರಂ” ಎನ್.ಜಯಭೀಮ್ ಜೊಯ್ಸ್, ಶಿವಮೊಗ್ಗ

Klive special Article ಶ್ರೀಶಂಕರಾಚಾರ್ಯ ಗುರುಗಳು (ಶ್ರೀಶಂಕರಜಯಂತಿಯ ಸಂದರ್ಭದಲ್ಲಿ)ಪ್ರತಿವರ್ಷ ವೈಶಾಖಮಾಸದ...

RM Manjunath Gowda ಹುಲಿಕಲ್ ಘಾಟಿ ಪ್ರಕರಣ.ಇಂಜಿನಿಯರುಗಳೇ ಹೊಣೆ. ಎಫ್ ಐ ಆರ್ ದಾಖಲಿಸಲು ಎಸ್ ಪಿ.ಅವರಿಗೆ ಮನವಿ ಮಾಡುವೆ- ಆರ್.ಎಂ.ಮಂಜುನಾಥ ಗೌಡ.

RM Manjunath Gowda ಹುಲಿಕಲ್ ಘಾಟಿ ಪ್ರಕರಣದಲ್ಲಿ ಎಫ್ಐಆರ್ ದಾಖಲಾದ ಹಿನ್ನೆಲೆಯಲ್ಲಿ ಮಕೆನಾಡು...