Friday, April 18, 2025
Friday, April 18, 2025

ಭದ್ರಾ ಮೇಲ್ದಂಡೆಗೆ ರಾಷ್ಟ್ರೀಯ ಯೋಜನೆ ವ್ಯಾಪ್ತಿ ?

Date:

ಡಿಸೆಂಬರ್ 6ರಂದು ನಡೆಯಲಿರುವ ಮಹತ್ವದ ಸಭೆಯಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಕುರಿತು ಮಹತ್ವದ ಚರ್ಚೆ ಆಗಲಿದೆ. ಈ ಯೋಜನೆಯನ್ನೂ ರಾಷ್ಟ್ರೀಯ ಯೋಜನೆಯನ್ನಾಗಿ ಘೊಷಿಸುವ ಪ್ರಸ್ತಾಪವಿದೆ. ಅಂತಿಮ ತೀರ್ಮಾನ ಕೈಗೊಳ್ಳುವ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಕೇಂದ್ರ ಜಲ ಶಕ್ತಿ, ಆರೋಗ್ಯ, ಕಾನೂನು ಸಚಿವರ ಭೇಟಿ ಬಳಿಕ ಮಾತನಾಡಿದ ಅವರು, ಗೋದಾವರಿ, ಕಾವೇರಿ, ಕೃಷ್ಣಾ ಮಹಾ ನದಿಗಳ ಜೋಡಣೆ ಬಗ್ಗೆ ರಾಜ್ಯದ ಅಹವಾಲನ್ನು ಕೇಳದೆ ಡಿಪಿಆರ್ ಮಾಡಬಾರದು ಹಾಗೂ ರಾಜ್ಯದ ನೀರಿನ ಪಾಲು ಎಷ್ಟು ಎಂಬುದು ನಿಗದಿ ಆಗುವವರೆಗೆ ಯೋಜನೆ ಅನುಷ್ಠಾನಕ್ಕೆ ಅನುಮೋದನೆ ನೀಡಬಾರದು ಎನ್ನುವ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ ಎಂದರು.
ಕೃಷ್ಣಾ ಮೇಲ್ದಂಡೆ ಯೋಜನೆಯ ಎರಡನೇ ನ್ಯಾಯಾಧಿಕರಣ ಅಧಿಸೂಚನೆಯಲ್ಲಿ ನ್ಯಾಯಾಲಯದ ಆದೇಶದಂತೆ ಕೇಂದ್ರ ಸರಕಾರ ತನ್ನ ನಿಲುವನ್ನು ತಿಳಿಸಬೇಕು. ನ್ಯಾಯಾಧಿಕರಣ ಸಂಪೂರ್ಣ ವರದಿ ನಂತರ ಸುಪ್ರೀಂಕೋರ್ಟ್ ತೀರ್ಪಿನ ಪರಿಪಾಲನೆ ಆಗಬೇಕು ಎನ್ನುವ ನಿರ್ದೇಶನ ನೀಡಬೇಕೆಂದು ಮನವಿ ಮಾಡಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...

ದತ್ತಿ ನಿಧಿ ಕಾರ್ಯಕ್ರಮಗಳು ಸಮಾಜಮುಖಿಯಾಗಿರಲಿ-ಮಾನಸ ಶಿವರಾಮಕೃಷ್ಣ

ವಮೊಗ್ಗ ಜಿಲ್ಲಾ ಲೇಖಕಿಯರ ಮತ್ತು ವಾಚಕಿಯರ ಸಂಘದಿಂದ ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....