Wednesday, August 12, 2026
Wednesday, August 12, 2026

ಜೋವಾದ್ ವಿರುದ್ಧ ಕೇಂದ್ರ ಸನ್ನದ್ಧ – ಪ್ರಧಾನಿ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಜೋವಾದ್ ಚಂಡಮಾರುತ ಡಿ.4ಕ್ಕೆ ಓಡಿಶಾ, ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಲಿದೆ. ಉಭಯ ರಾಜ್ಯಗಳು ಸೈಕ್ಲೋನ್ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚಂಡಮಾರುತ ಎದುರಿಸಲು ಸಿದ್ಧತೆ ಪರಿಶೀಲಿಸಲು ದಿಲ್ಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು‌.ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು, ನೆರವಿನ ಕೇಂದ್ರಗಳ ಸ್ಥಾಪನೆ, ಸಹಾಯವಾಣಿ, ಎನ್ ಡಿಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ಪಡೆಗಳ ನಿಯೋಜನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಚಂಡಮಾರುತದ ಪರಿಣಾಮ ಶುಕ್ರವಾರದಿಂದಲೇ ಒಡಿಶಾ ಮತ್ತು ಆಂಧ್ರಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಡಿಸೆಂಬರ್ 4ರಂದು ಬೆಳಿಗ್ಗೆ ಚಂಡಮಾರುತ ಆಂಧ್ರ ಮತ್ತು ಒಡಿಶಾ ತೀರ ಪ್ರವೇಶಿಸಲಿದೆ. ಆದರೆ ಚಂಡಮಾರುತದಿಂದ ರಾಜ್ಯದ ಮೇಲೆ ಹೆಚ್ಚಿನ ಪರಿಣಾಮ ಇಲ್ಲವೆಂದು ಹವಾಮಾನ ಇಲಾಖೆ ವರದಿ ಮಾಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...