Monday, December 15, 2025
Monday, December 15, 2025

ಕಗ್ಗಂಟ್ಟಾಗಿರುವ ಪದವೀಧರ ಶಿಕ್ಷಕರ ವರ್ಗಾವಣೆ

Date:

ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮತ್ತೆ ಗೊಂದಲ ಮುಂದುವರೆದಿದೆ. 6ರಿಂದ 8ನೇ ತರಗತಿ ಬೋಧನೆ ಮಾಡುವ ಪದವೀಧರ ಶಿಕ್ಷಕರನ್ನು (ಜಿಪಿಟಿ) ವರ್ಗಾವಣೆಗೆ ಪರಿಗಣಿಸದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕಳೆದ ಎರಡು ವರ್ಷಗಳಿಂದ ಹಲವು ತೊಂದರೆಗಳ ನಡುವೆ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಕುಂಟುತ್ತ ಸಾಗಿವೆ. ತಾಲೂಕುವಾರು ಮಂಜೂರಾದ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ ಘಟಕದ ಒಳಗೆ ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿತ್ತು.
ನವೆಂಬರ್ 23ರಂದು ಸ್ಥಗಿತಗೊಳಿಸಲಾಗಿದ್ದ ವರ್ಗಾವಣೆ ಪ್ರಕ್ರಿಯೆಗಳನ್ನು ನವೆಂಬರ್ 29 ರಿಂದ ಆರಂಭಿಸಲಾಗಿದೆ. 2015 – 16ನೇ ಸಾಲಿನಲ್ಲಿ ನೇಮಕಾತಿಗೊಂಡ ಸಾವಿರಾರು ಪದವೀಧರ ಶಿಕ್ಷಕರು ನಿಯಮಗಳನ್ವಯ ಈಗಾಗಲೇ ಐದು ವರ್ಷ ಸೇವಾವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹತೆ ಪಡೆದಿದ್ದಾರೆ. ಆದರೆ ಹುದ್ದೆಗಳು ಲಭ್ಯವಿದ್ದರೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಜಿಪಿಟಿ ಶಿಕ್ಷಕರನ್ನು ಪರಿಗಣಿಸಿದೆ ಇರುವುದರಿಂದ ತೀವ್ರ ಆಕ್ಷೇಪ ಕೇಳಿ ಬಂದಿದೆ.
ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ವರ್ಗಾವಣೆ ಮಾಡುತ್ತಿರುವುದು ಕಂಡುಬಂದಿದೆ.
ಜಿಪಿಟಿ ಶಿಕ್ಷಕರನ್ನು ಈ ವರ್ಷ ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ. ಈ ಹಿಂದೆಯೇ ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಮುಂದಿನ ವರ್ಗಾವಣೆ ವೇಳೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ಆರ್. ವಿಶಾಲ್ ಅವರು ತಿಳಿಸಿದ್ದಾರೆ.
ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ 1ರಿಂದ 5ನೇ ತರಗತಿಗೆ ಬೋಧನೆ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ( ಪಿಎಸ್ ಟಿ) ಮುಚ್ಚಳಿಕೆ ಬರೆಸಿಕೊಂಡು, ವರ್ಗಾವಣೆ ನಡೆಸುತ್ತಿರುವುದರ ಸಾರ್ವಜನಿಕ ಶಿಕ್ಷಣ ಇಲಾಖೆ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಪದವೀಧರ ಶಿಕ್ಷಕರು ತೀರ್ಮಾನಿಸಿದ್ದಾರೆ. ಇದರಿಂದ ವರ್ಗಾವಣೆ ಪ್ರಕ್ರಿಯೆಗಳಿಗೆ ಮತ್ತೆ ವಿಘ್ನ ಎದುರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...