Saturday, May 9, 2026
Saturday, May 9, 2026

ಕಗ್ಗಂಟ್ಟಾಗಿರುವ ಪದವೀಧರ ಶಿಕ್ಷಕರ ವರ್ಗಾವಣೆ

Date:

ಸರಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಮತ್ತೆ ಗೊಂದಲ ಮುಂದುವರೆದಿದೆ. 6ರಿಂದ 8ನೇ ತರಗತಿ ಬೋಧನೆ ಮಾಡುವ ಪದವೀಧರ ಶಿಕ್ಷಕರನ್ನು (ಜಿಪಿಟಿ) ವರ್ಗಾವಣೆಗೆ ಪರಿಗಣಿಸದೆ ಇರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕಳೆದ ಎರಡು ವರ್ಷಗಳಿಂದ ಹಲವು ತೊಂದರೆಗಳ ನಡುವೆ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗಳು ಕುಂಟುತ್ತ ಸಾಗಿವೆ. ತಾಲೂಕುವಾರು ಮಂಜೂರಾದ ಶಿಕ್ಷಕರ ಹುದ್ದೆಗಳಿಗೆ ಅನುಗುಣವಾಗಿ ಘಟಕದ ಒಳಗೆ ಕೋರಿಕೆ ವರ್ಗಾವಣೆಗೆ ಅವಕಾಶ ಕಲ್ಪಿಸಲಾಗಿತ್ತು.
ನವೆಂಬರ್ 23ರಂದು ಸ್ಥಗಿತಗೊಳಿಸಲಾಗಿದ್ದ ವರ್ಗಾವಣೆ ಪ್ರಕ್ರಿಯೆಗಳನ್ನು ನವೆಂಬರ್ 29 ರಿಂದ ಆರಂಭಿಸಲಾಗಿದೆ. 2015 – 16ನೇ ಸಾಲಿನಲ್ಲಿ ನೇಮಕಾತಿಗೊಂಡ ಸಾವಿರಾರು ಪದವೀಧರ ಶಿಕ್ಷಕರು ನಿಯಮಗಳನ್ವಯ ಈಗಾಗಲೇ ಐದು ವರ್ಷ ಸೇವಾವಧಿಯನ್ನು ಪೂರ್ಣಗೊಳಿಸಿ ವರ್ಗಾವಣೆಗೆ ಅರ್ಹತೆ ಪಡೆದಿದ್ದಾರೆ. ಆದರೆ ಹುದ್ದೆಗಳು ಲಭ್ಯವಿದ್ದರೂ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಗೆ ಜಿಪಿಟಿ ಶಿಕ್ಷಕರನ್ನು ಪರಿಗಣಿಸಿದೆ ಇರುವುದರಿಂದ ತೀವ್ರ ಆಕ್ಷೇಪ ಕೇಳಿ ಬಂದಿದೆ.
ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ವರ್ಗಾವಣೆ ಮಾಡುತ್ತಿರುವುದು ಕಂಡುಬಂದಿದೆ.
ಜಿಪಿಟಿ ಶಿಕ್ಷಕರನ್ನು ಈ ವರ್ಷ ವರ್ಗಾವಣೆಗೆ ಪರಿಗಣಿಸಲಾಗುವುದಿಲ್ಲ. ಈ ಹಿಂದೆಯೇ ಇದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಮುಂದಿನ ವರ್ಗಾವಣೆ ವೇಳೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ಆರ್. ವಿಶಾಲ್ ಅವರು ತಿಳಿಸಿದ್ದಾರೆ.
ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ 1ರಿಂದ 5ನೇ ತರಗತಿಗೆ ಬೋಧನೆ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ( ಪಿಎಸ್ ಟಿ) ಮುಚ್ಚಳಿಕೆ ಬರೆಸಿಕೊಂಡು, ವರ್ಗಾವಣೆ ನಡೆಸುತ್ತಿರುವುದರ ಸಾರ್ವಜನಿಕ ಶಿಕ್ಷಣ ಇಲಾಖೆ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಪದವೀಧರ ಶಿಕ್ಷಕರು ತೀರ್ಮಾನಿಸಿದ್ದಾರೆ. ಇದರಿಂದ ವರ್ಗಾವಣೆ ಪ್ರಕ್ರಿಯೆಗಳಿಗೆ ಮತ್ತೆ ವಿಘ್ನ ಎದುರಾಗುವ ಸಾಧ್ಯತೆಯಿದೆ ಎಂಬ ಮಾಹಿತಿ ಲಭ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...