Wednesday, January 21, 2026
Wednesday, January 21, 2026

ಆತಂಕಕ್ಕೊಳಗಾಗಬೇಡಿ -ಡಾ. ಸುಧಾಕರ್

Date:

ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಬೆಂಗಳೂರಿನ ಮೂಲಕ ಭಾರತಕ್ಕೂ ಲಗ್ಗೆ ಇಟ್ಟಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ 46 ವರ್ಷದ ವೈದ್ಯರೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜೆಪಿ ನಗರದಲ್ಲಿ ವಾಸವಿರುವ ಸೋಂಕಿತರ ಸಂಪರ್ಕದಲ್ಲಿದ್ದ ಪತ್ನಿ ಸೇರಿ ಐದು ಮಂದಿಗೆ ಕೊರೊನಾ ಸೋಂಕು ತಲುಪಿದೆ. ಇವರೆಲ್ಲರೂ ಕೂಡ ವೈದ್ಯರಾಗಿದ್ದಾರೆ. ಮನೆಯಲ್ಲಿ ಪ್ರತ್ಯೇಕ ತಾರೀಕಿಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸೋಂಕಿತ ವೈದ್ಯ ಹಾಗೂ ಇತರೆ ಇಬ್ಬರೂ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವೈದ್ಯರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದರು. ಇವರು ಯಾವುದೇ ಪ್ರಯಾಣ ಇತಿಹಾಸ ಹೊಂದಿರಲಿಲ್ಲ. ಆದರೂ ಸೋಂಕು ಹೇಗೆ ತಲುಪಿತು ಎಂಬುದು ನಿಗೂಢವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಶಿವಮೊಗ್ಗ :ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ -3 ಕಛೇರಿಯಲ್ಲಿ...

S.N.Chennabasappa ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ ವಚನ ಅಳವಡಿಸಿಕೊಳ್ಳಬೇಕು –ಎಸ್.ಎನ್. ಚನ್ನಬಸಪ್ಪ

S.N.Chennabasappa ಪ್ರತಿಯೊಬ್ಬ ವ್ಯಕ್ತಿ ತನ್ನ ಜೀವನದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಳ್ಳಲು ನಿಜಶರಣರ...

Klive Special Article ದಾಖಲೆ ನಿರ್ಮಿಸಿದ ವೀಣೆಯ ಝೇಂಕಾರ

Klive Special Article ಶಿವಮೊಗ್ಗ ನಿಜವಾಗಿಯೂ ಸಾಂಸ್ಕೃತಿಕವಾಗಿ ಶ್ರೀಮಂತವಾದ ಊರು....

ಜ.24 ರಿಂದ ಮಲೆನಾಡು ಕರಕುಶಲ ಉತ್ಸವ – ಸಿರಿಧಾನ್ಯ ಮೇಳ-ಫಲ ಪುಷ್ಪ ಪ್ರದರ್ಶನ : ಹೇಮಂತ್ ಎನ್.

ಈ ಬಾರಿ ಹಲವಾರು ವಿಶೇಷತೆಗಳೊಂದಿಗೆ ಮಲೆನಾಡು ಕರಕುಶಲ ಉತ್ಸವ ಸಿರಿಧಾನ್ಯ...