Saturday, May 9, 2026
Saturday, May 9, 2026

ಆತಂಕಕ್ಕೊಳಗಾಗಬೇಡಿ -ಡಾ. ಸುಧಾಕರ್

Date:

ಕೊರೊನಾ ವೈರಾಣುವಿನ ರೂಪಾಂತರಿ ಓಮಿಕ್ರಾನ್ ಬೆಂಗಳೂರಿನ ಮೂಲಕ ಭಾರತಕ್ಕೂ ಲಗ್ಗೆ ಇಟ್ಟಿದೆ. ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿರುವ 46 ವರ್ಷದ ವೈದ್ಯರೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಜೆಪಿ ನಗರದಲ್ಲಿ ವಾಸವಿರುವ ಸೋಂಕಿತರ ಸಂಪರ್ಕದಲ್ಲಿದ್ದ ಪತ್ನಿ ಸೇರಿ ಐದು ಮಂದಿಗೆ ಕೊರೊನಾ ಸೋಂಕು ತಲುಪಿದೆ. ಇವರೆಲ್ಲರೂ ಕೂಡ ವೈದ್ಯರಾಗಿದ್ದಾರೆ. ಮನೆಯಲ್ಲಿ ಪ್ರತ್ಯೇಕ ತಾರೀಕಿಗೆ ಒಳಗಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ನ ಸಮರ್ಥ ಪರೀಕ್ಷೆ ವ್ಯವಸ್ಥೆಯಿಂದಾಗಿ ಬೇಗನೆ ಕೋವಿಡ್ ಓಮಿಕ್ರಾನ್ ವೈರಾಣು ಪತ್ತೆಯಾಗಿದೆ. ಜನರು ತಪ್ಪದೇ ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಆರೋಗ್ಯ ಸಚಿವರಾದ ಡಾ.ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಸೋಂಕಿತ ವೈದ್ಯ ಹಾಗೂ ಇತರೆ ಇಬ್ಬರೂ ಕೋವಿಡ್ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕಿತ ವೈದ್ಯರು ಎರಡೂ ಡೋಸ್ ಲಸಿಕೆ ಪಡೆದುಕೊಂಡಿದ್ದರು. ಇವರು ಯಾವುದೇ ಪ್ರಯಾಣ ಇತಿಹಾಸ ಹೊಂದಿರಲಿಲ್ಲ. ಆದರೂ ಸೋಂಕು ಹೇಗೆ ತಲುಪಿತು ಎಂಬುದು ನಿಗೂಢವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga police ಅನಾಮಧೇಯ ಮೃತವ್ಯಕ್ತಿ ಪತ್ತೆ. ಕೋಟೆ ಪೊಲೀಸ್ ಠಾಣೆ ಪ್ರಕಟಣೆ.

Shivamogga police ಮೇ. 04 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಲಷ್ಕರ್...

Shikaripura Station ಶಿಕಾರಿಪುರ ಠಾಣೆಯಲ್ಲಿ ವಿವಿಧ ವಸ್ತುಗಳ ಹರಾಜು.

Shikaripura Station ಶಿವಮೊಗ್ಗ ಜಿಲ್ಲೆ ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ತನಿಖೆಯ...

Youth Hostel Association ಸರ್ ಪಾಸ್ ಹಿಮಾಲಯ ಚಾರಣವು ಪ್ರತಿಯೊಬ್ಬರಿಗೂ ಸಂತಸ ಹೆಚ್ಚಿಸುತ್ತದೆ- ಎಸ್.ಎಸ್.ವಾಗೀಶ್.

Youth Hostel Association ಚಾರಣಿಗರ ಸ್ವರ್ಗ ಹಿಮಾಲಯ ಪ್ರದೇಶ. ಪ್ರತಿ ದಿನ ಪ್ರಾಕೃತಿಕ...