Tuesday, December 9, 2025
Tuesday, December 9, 2025

ಪರಸ್ಪರ ಪ್ರೀತಿಯೇ ಮಾನವ ಧರ್ಮ.- ಗೆಹ್ಲೋಟ್

Date:

ಧರ್ಮದ ಹಾದಿಯಲ್ಲಿ ಸಾಕುವವನ ಹೃದಯ ನಿರ್ಮಲವಾಗಿರುತ್ತದೆ. ಆತನಲ್ಲಿ ಕರುಣೆ ಮತ್ತು ಕ್ಷಮಾ ಗುಣವಿರುತ್ತದೆ. ಮಾನವರು ಪರಸ್ಪರ ಪ್ರೀತಿಸುವಲ್ಲಿ ಧರ್ಮವಾಗಿರುತ್ತದೆ ಮತ್ತು ಅಂತಹ ಗುಣವು ಇತರರ ದುಃಖವನ್ನು ಕಳೆಯುತ್ತದೆ. ಇಂದಿನ ದಿನಗಳಲ್ಲಿ ಸರ್ವಧರ್ಮ ಸಮನ್ವಯ ಮತ್ತು ಸಮ್ಮೇಳನದ ತುರ್ತು ಇದ್ದೇ ಇದೆ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಹೇಳಿದ್ದಾರೆ.
ಧರ್ಮಸ್ಥಳ ಕ್ಷೇತ್ರದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಸರ್ವಧರ್ಮ ಸಮ್ಮೇಳನದ 89 ನೇ ಅಧಿವೇಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಧರ್ಮಸ್ಥಳ ಕ್ಷೇತ್ರ ಧರ್ಮದ ನಿವಾಸವೇ ಆಗಿದೆ. ಮಾನವತೆಯ ಸ್ಥಾನವಾಗಿದೆ. ಈ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆಯಬೇಕೆಂಬ ನನ್ನ ಬಹುಕಾಲದ ಕನಸು ಇಂದು ಈಡೇರಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಬೆಂಗಳೂರಿನ ಎಸ್‌. ವ್ಯಾಸ ಯೋಗ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ರಾಮಚಂದ್ರ ಭಟ್ ಅವರು, ದೇಹ, ಭೌತಿಕತೆ, ಇಂದ್ರಿಯ ಲೋಲುಪತೆಯನ್ನು ಮೀರಿದ್ದೇ ಧರ್ಮ. ಈ ಹೆಸರನ್ನಿಟ್ಟುಕೊಂಡು ಮತಪಂಥಗಳ ಹೊಂಡ ತೋಡಿ ಕೊಂಡರೆ ಅದು ಧರ್ಮ ವಾಗುವುದಿಲ್ಲ ಎಂದರು.
ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ‌. ವೀರೇಂದ್ರ ಹೆಗ್ಗಡೆಯವರು ಅತಿಥಿಗಳನ್ನು ಸ್ವಾಗತಿಸಿ, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರನ್ನು ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddaramaiah ವಿಧಾನಸಭೆ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿ ಸಜ್ಜು.

CM Siddaramaiah ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಳಿಗಾಲದ ಅಧಿವೇಶನದ ಪ್ರಯುಕ್ತ ಸುವರ್ಣ...

Shimoga News ಜೀವರಕ್ಷಣಾ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು- ಸೀಮಾ ಆನಂದ್

Shimoga News ಜೀವ ರಕ್ಷಿಸುವ ಕೌಶಲ್ಯವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳುವುದು ಅತ್ಯಂತ...

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ...

D S Arun ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಶಾಸಕ ಡಿ.ಎಸ್.ಅರುಣ್ ಆಯ್ಕೆ.

D S Arun ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಶಿವಮೊಗ್ಗ ವಲಯ...