Thursday, December 11, 2025
Thursday, December 11, 2025

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ RTPCR ಕಡ್ಡಾಯ.

Date:

ಬೆಂಗಳೂರು ನಗರದಲ್ಲಿ ಇಬ್ಬರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಸೋಂಕು ತಡೆಗೆ ಸರಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.
ಹೊಸದಿಲ್ಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಮಹತ್ವದ ಸಭೆ ನಡೆಸಲಾಗಿದೆ. ಓಮಿಕ್ರಾನ್ ಸೋಂಕು ತಡೆಗಟ್ಟಲು ಪರಿಷ್ಕೃತ ಮಾರ್ಗಸೂಚಿ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 13 ದೇಶಗಳಲ್ಲಿ
ಓಮಿಕ್ರಾನ್ ಸೋಂಕು ಹೆಚ್ಚಾಗಿ ಹರಡುತ್ತಿದೆ ಆದರೆ, ತೀವ್ರವಾಗಿ ಬಾಧಿಸುವುದಿಲ್ಲ ಎಂಬುದು ಸಮಾಧಾನದ ವಿಷಯ ಎಂದು ತಿಳಿಸಿದರು.
ಸಭೆಯಲ್ಲಿ ಮದುವೆ ಸಮಾರಂಭಗಳಿಗೆ ಕೇವಲ ,500 ಜನರ ಮಿತಿ ಹೊಂದಿರಬೇಕು. ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.
ಸಿನಿಮಾ ಮಾಲ್ ಗಳಲ್ಲಿ ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ .
ಏರ್ ಪೋರ್ಟ್ ನಲ್ಲಿ ಕೋವಿಡ್ ಟೆಸ್ಟ್ ನಡೆಸಲು 3000 ರೂಪಾಯಿ ಪಾವತಿ ಮಾಡಬೇಕಾಗುತ್ತದೆ.
ಸರ್ಕಾರಿ ನೌಕರರು ಎರಡೂ ಡೋಸ್ ಲಸಿಕೆ ಪಡೆದಿರಬೇಕು.
ಪೋಷಕರು ಸಹ 2 ಡೋಸ್ ಲಸಿಕೆ ಪಡೆದಿರಬೇಕು.
ಸಾರ್ವಜನಿಕವಾಗಿ ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ ಧರಿಸದಿದ್ದರೆ ನಗರ ಪ್ರದೇಶಗಳಲ್ಲಿ 250 ರೂಪಾಯಿ ಮತ್ತು ತಾಲೂಕುಗಳಲ್ಲಿ 150 ರೂಪಾಯಿ ದಂಡ ತೆರಬೇಕಾಗುತ್ತದೆ ಎಂಬ ನಿಮಯಗಳನ್ನು ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ತಿಳಿಸಿದರು. ಇವು ಸಭೆಯ ಪ್ರಮುಖ ನಿರ್ಧಾರಗಳ ಮುಖ್ಯಾಂಶಗಳಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...