Thursday, February 5, 2026
Thursday, February 5, 2026

ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ RTPCR ಕಡ್ಡಾಯ.

Date:

ಬೆಂಗಳೂರು ನಗರದಲ್ಲಿ ಇಬ್ಬರಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ್ದಾರೆ.
ಸೋಂಕು ತಡೆಗೆ ಸರಕಾರ ಪರಿಷ್ಕೃತ ಮಾರ್ಗಸೂಚಿ ಹೊರಡಿಸುವ ಸಾಧ್ಯತೆ ಇದೆ.
ಹೊಸದಿಲ್ಲಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿಯವರು, ಸಚಿವರು ಮತ್ತು ಅಧಿಕಾರಿಗಳನ್ನೊಳಗೊಂಡ ಮಹತ್ವದ ಸಭೆ ನಡೆಸಲಾಗಿದೆ. ಓಮಿಕ್ರಾನ್ ಸೋಂಕು ತಡೆಗಟ್ಟಲು ಪರಿಷ್ಕೃತ ಮಾರ್ಗಸೂಚಿ ಹೊರಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. 13 ದೇಶಗಳಲ್ಲಿ
ಓಮಿಕ್ರಾನ್ ಸೋಂಕು ಹೆಚ್ಚಾಗಿ ಹರಡುತ್ತಿದೆ ಆದರೆ, ತೀವ್ರವಾಗಿ ಬಾಧಿಸುವುದಿಲ್ಲ ಎಂಬುದು ಸಮಾಧಾನದ ವಿಷಯ ಎಂದು ತಿಳಿಸಿದರು.
ಸಭೆಯಲ್ಲಿ ಮದುವೆ ಸಮಾರಂಭಗಳಿಗೆ ಕೇವಲ ,500 ಜನರ ಮಿತಿ ಹೊಂದಿರಬೇಕು. ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ.
ಸಿನಿಮಾ ಮಾಲ್ ಗಳಲ್ಲಿ ಎರಡೂ ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ .
ಏರ್ ಪೋರ್ಟ್ ನಲ್ಲಿ ಕೋವಿಡ್ ಟೆಸ್ಟ್ ನಡೆಸಲು 3000 ರೂಪಾಯಿ ಪಾವತಿ ಮಾಡಬೇಕಾಗುತ್ತದೆ.
ಸರ್ಕಾರಿ ನೌಕರರು ಎರಡೂ ಡೋಸ್ ಲಸಿಕೆ ಪಡೆದಿರಬೇಕು.
ಪೋಷಕರು ಸಹ 2 ಡೋಸ್ ಲಸಿಕೆ ಪಡೆದಿರಬೇಕು.
ಸಾರ್ವಜನಿಕವಾಗಿ ಮಾಸ್ಕ ಕಡ್ಡಾಯವಾಗಿ ಧರಿಸಬೇಕು. ಮಾಸ್ಕ ಧರಿಸದಿದ್ದರೆ ನಗರ ಪ್ರದೇಶಗಳಲ್ಲಿ 250 ರೂಪಾಯಿ ಮತ್ತು ತಾಲೂಕುಗಳಲ್ಲಿ 150 ರೂಪಾಯಿ ದಂಡ ತೆರಬೇಕಾಗುತ್ತದೆ ಎಂಬ ನಿಮಯಗಳನ್ನು ಸಾರ್ವಜನಿಕರ ಗಮನಕ್ಕೆ ತರಬೇಕು ಎಂದು ತಿಳಿಸಿದರು. ಇವು ಸಭೆಯ ಪ್ರಮುಖ ನಿರ್ಧಾರಗಳ ಮುಖ್ಯಾಂಶಗಳಾಗಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...