Thursday, February 5, 2026
Thursday, February 5, 2026

ಬೆಳಗಾವಿಯಲ್ಲಿ ವಿಧಾನ ಸಭೆ ಅಧಿವೇಶನ

Date:

ಭಯದ ವಾತಾವರಣದ ಮಧ್ಯೆ ಅಧಿವೇಶನ ಬೇಡ ಎಂಬ ವಿಧಾನಮಂಡಳದ ನೌಕರರ, ಕೆಲ ಮಾಜಿ ಸಚಿವರ, ಶಾಸಕರ ಒತ್ತಡದ ಮಧ್ಯೆ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನದ ತಯಾರಿ ನಡೆದಿದೆ.
ಈ ಮಧ್ಯೆ ಸರಕಾರ ಕಲಾಪ ನಡೆಸುವ ಸಂಬಂಧ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ.
ಇತ್ತೀಚೆಗೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆದ ಅಶಿಸ್ತಿನ ಘಟನೆಗಳು ವೈಯಕ್ತಿಕವಾಗಿ ನನಗೆ ನೋವು ತಂದಿದೆ. ಈ ಕುರಿತು ಲೋಕಸಭೆ ಸ್ಪೀಕರ್ ಮತ್ತು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದು ತಿಳಿಸಿದ್ದೇನೆ. ನಮ್ಮ ವರ್ತನೆಯನ್ನು ಲಕ್ಷಾಂತರ ಕಣ್ಣುಗಳು ನೋಡುತ್ತಿರುತ್ತವೆ. ನಡುವಳಿಕೆಯಲ್ಲಿ ನಿಯಮ ಸಭ್ಯತೆ ಮೀರದಂತಿರಬೇಕು. ಅಧಿವೇಶನದಲ್ಲಿ ಶಿಸ್ತು ಉಲ್ಲಂಘಿಸುವ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಿಳಿಸಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ ಸ್ಪೀಕರ್ ಕಾಗೇರಿ, ಆತಂಕ, ಮುಂಜಾಗ್ರತೆ ಅನುಸರಿಸಿ ಡಿ. 13ರಿಂದ ಅಧಿವೇಶನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸ್ಥಳೀಯ ಸಂಸ್ಥೆ, ಪರಿಷತ್ ಚುನಾವಣೆ, ಅತಿವೃಷ್ಟಿ, ಕೋವಿಡ್ ನಡುವೆ ಅಧಿವೇಶನ ನಡೆಸಲಾಗುವುದೆಂದು ಇದೀಗ ತಾನೆ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವ ಶ್ರೀ ಅಶೋಕ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...