Wednesday, October 2, 2024
Wednesday, October 2, 2024

ಬೆಳಗಾವಿಯಲ್ಲಿ ವಿಧಾನ ಸಭೆ ಅಧಿವೇಶನ

Date:

ಭಯದ ವಾತಾವರಣದ ಮಧ್ಯೆ ಅಧಿವೇಶನ ಬೇಡ ಎಂಬ ವಿಧಾನಮಂಡಳದ ನೌಕರರ, ಕೆಲ ಮಾಜಿ ಸಚಿವರ, ಶಾಸಕರ ಒತ್ತಡದ ಮಧ್ಯೆ ಬೆಳಗಾವಿ ಸುವರ್ಣಸೌಧದಲ್ಲಿ ಅಧಿವೇಶನದ ತಯಾರಿ ನಡೆದಿದೆ.
ಈ ಮಧ್ಯೆ ಸರಕಾರ ಕಲಾಪ ನಡೆಸುವ ಸಂಬಂಧ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಮುಂದಾಗಿದೆ.
ಇತ್ತೀಚೆಗೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ನಡೆದ ಅಶಿಸ್ತಿನ ಘಟನೆಗಳು ವೈಯಕ್ತಿಕವಾಗಿ ನನಗೆ ನೋವು ತಂದಿದೆ. ಈ ಕುರಿತು ಲೋಕಸಭೆ ಸ್ಪೀಕರ್ ಮತ್ತು ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದು ತಿಳಿಸಿದ್ದೇನೆ. ನಮ್ಮ ವರ್ತನೆಯನ್ನು ಲಕ್ಷಾಂತರ ಕಣ್ಣುಗಳು ನೋಡುತ್ತಿರುತ್ತವೆ. ನಡುವಳಿಕೆಯಲ್ಲಿ ನಿಯಮ ಸಭ್ಯತೆ ಮೀರದಂತಿರಬೇಕು. ಅಧಿವೇಶನದಲ್ಲಿ ಶಿಸ್ತು ಉಲ್ಲಂಘಿಸುವ ಶಾಸಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ತಿಳಿಸಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ ಸ್ಪೀಕರ್ ಕಾಗೇರಿ, ಆತಂಕ, ಮುಂಜಾಗ್ರತೆ ಅನುಸರಿಸಿ ಡಿ. 13ರಿಂದ ಅಧಿವೇಶನ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಸ್ಥಳೀಯ ಸಂಸ್ಥೆ, ಪರಿಷತ್ ಚುನಾವಣೆ, ಅತಿವೃಷ್ಟಿ, ಕೋವಿಡ್ ನಡುವೆ ಅಧಿವೇಶನ ನಡೆಸಲಾಗುವುದೆಂದು ಇದೀಗ ತಾನೆ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವ ಶ್ರೀ ಅಶೋಕ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಹೆಣ್ಣುಮಕ್ಕಳಿಗೆ ಪಾಠ ಪ್ರವಚನ ಕಲ್ಪಿಸಿರುವ ಸರ್ಕಾರ ದ ಮಹತ್ವ ಯೋಜನೆ- ಭಾರದ್ವಾಜ್

Rotary Shivamogga ದೇಶದ ಏಳಿಗೆಗಾಗಿ ಉತ್ತಮ ಪ್ರಜೆಗಳನ್ನು ನಿರ್ಮಿಸುವ ಮಹತ್ವದ ಕಾರ್ಯ...

Gandhi Jayanthi ಗಾಂಧೀಜಿ ಅವರಲ್ಲದೇ ಅನೇಕರ ಹೋರಾಟದ ಫಲ, ಸ್ವಾತಂತ್ರ್ಯ. ಅದನ್ನ ಉಳಿಸಿಕೊಳ್ಳಬೇಕು- ಮಧು ಬಂಗಾರಪ್ಪ

Gandhi Jayanthi ಗಾಂಧೀಜಿ ಸೇರಿದಂತೆ ಅನೇಕ ಹೋರಾಟಗಾರರ ಹೋರಾಟದ ಫಲದಿಂದ ನಮಗೆ...

Shivamogga Dasara ಶಿವಮೊಗ್ಗ ದಸರಾ ಉತ್ಸವಕ್ಕೆ ಕ್ಷಣಗಣನೆ

Shivamogga Dasara ರಾಜ್ಯದ ಎರಡನೇ ಅತಿ ದೊಡ್ಡ ದಸರಾ ಮಹೋತ್ಸವ ‘ಶಿವಮೊಗ್ಗ...

Chaudeshwari Temple ಶಿವಮೊಗ್ಗ ಚಾಲುಕ್ಯನಗರದ ಶ್ರೀಚೌಡೇಶ್ವರಿ ದೇಗುಲದಲ್ಲಿ ನವರಾತ್ರಿ ಉತ್ಸವ

Chaudeshwari Temple ಚಾಲುಕ್ಯನಗರದಲ್ಲಿರುವ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನ ನವರಾತ್ರಿಯ...