Friday, June 20, 2025
Friday, June 20, 2025

ವೃದ್ಧಾಪ್ಯದಲ್ಲಿ ತಂದೆತಾಯಿ ಒಟ್ಟಿಗಿರಿ, ಕೋರ್ಟು.ಹಿತನುಡಿ.

Date:

ನಾನು ಎನ್ನುವ ಅಹಂ ಬಿಟ್ಟು ನಾವು ಎನ್ನುವ ಸಂತೋಷದಿಂದಾಗಿ ಎಲ್ಲರೂ ಒಟ್ಟಾಗಿ ಜೀವನ ನಡೆಸಿ ಎಂದು ಸ್ಥಿರಾಸ್ತಿ ವಿವಾದ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿರುವ ವೃದ್ಧ ತಂದೆ ತಾಯಿ ಮತ್ತು ಮಕ್ಕಳಿಗೆ ಹೈಕೋರ್ಟ್ ಬುದ್ಧಿವಾದ ಹೇಳಿದ ಪ್ರಸಂಗ ನಡೆದಿದೆ.
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಯಾಗಿ ಡಿವೈಎಸ್ಪಿ ಹುದ್ದೆಯಿಂದ ನಿವೃತ್ತರಾಗಿರುವ ಅರ್ಜಿದಾರರ ತಂದೆಗೆ ಈಗ 72 ವರ್ಷ. ತಾಯಿಗೆ 62 ವರ್ಷ. ಸಂತ್ರಸ್ತ ತಂದೆ 1987 ಮತ್ತು 1994 ರಲ್ಲಿ ಎರಡು ಬಾರಿ ಮುಖ್ಯಮಂತ್ರಿಗಳ ಪೋಲೀಸ್ ಪದಕ ಪಡೆದು ಸೇವೆಯಲ್ಲಿ ಶಹಬ್ಬಾಸ್ ಗಿರಿ ಪಡೆದಿದ್ದವರು.
ಬೆಂಗಳೂರಿನ ವಿಜಯನಗರದ ಚಂದ್ರಾ ಲೇಔಟ್ ನಲ್ಲಿ ಮೂರು ಮಹಡಿಗಳ ಮನೆ ಇದೆ. ಅದನ್ನು ಬಿಟ್ಟು ಕೊಡುವಂತೆ ಮಗ ಕಿರುಕುಳ ನೀಡುತ್ತಿದ್ದಾನೆನ್ನುವುದು ಆರೋಪ. ಅವರು ಹಿರಿಯ ನಾಗರಿಕ ನಿರ್ವಹಣೆ ಮತ್ತು ಕಲ್ಯಾಣ 2007ರ ಕಲಂ 5 ಮತ್ತು 23 ರ ಅನುಸಾರ ಬೆಂಗಳೂರು ಉತ್ತರ ವಿಭಾಗದ ಉಪ ವಿಭಾಗಾಧಿಕಾರಿ ಕಚೇರಿಗೆ ದೂರು ಸಲ್ಲಿಸಿ ರಕ್ಷಣೆ ನೀಡುವಂತೆ ಕೋರಿದ್ದರು. ವಿಚಾರಣೆ ನಡೆಸಿದ ಅರೆನ್ಯಾಯಿಕ ನ್ಯಾಯ ಮಂಡಳಿಯ ಅಧಿಕಾರಿ ಕೆ. ರಂಗನಾಥ್, ವೃದ್ಧಾಪ್ಯದಲ್ಲಿರುವ ಪೋಷಕರಿಗೆ ಆಸ್ತಿ ಬಿಟ್ಟುಕೊಡುವಂತೆ ಆದೇಶಿಸಿದ್ದರು. ಮಗ ಆದೇಶವನ್ನು ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದಾನೆ.
ಕೇಸ್ ನ ವಿವರಗಳನ್ನು ಗಮನಿಸಿದರೆ ಅಜ್ಜ ಅಜ್ಜಿಗೆ ಮೊಮ್ಮಕ್ಕಳ ಮೇಲೆ, ಮೊಮ್ಮಕ್ಕಳಿಗೆ ಭಾರೀ ಪ್ರೀತಿ ಇದ್ದಂತೆ ಕಾಣುತ್ತಿದೆ. ಸುಂದರ ಚಳಿಗಾಲದ ಋತುಮಾನದಲ್ಲಿ ಬದುಕನ್ನು ಆಸ್ವಾದಿಸುವುದರ ಬದಲಿಗೆ ಅಹಂಕಾರಗಳ ಗೋಡೆ ಕಟ್ಟಿಕೊಂಡು ಯಾಕೆ ಜಗಳ ಜೀವನ ನಡೆಸುತ್ತಿದ್ದಿರಿ? ಅಪ್ಪ ಮಕ್ಕಳು ಆಸ್ತಿಗಾಗಿ ಜಗಳ ಕಾಯುತ್ತಾ ಕೋರ್ಟ್ ಕಚೇರಿ ಅಲೆಯುವುದು ಎಷ್ಟು ಸೂಕ್ತ? ಕುಳಿತು ಎಲ್ಲರೂ ವಿವಾದ ಬಗೆಹರಿಸಿಕೊಳ್ಳಿ ಎಂದು ನ್ಯಾಯಪೀಠ ಸಲಹೆ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Health and Family Welfare Department ಖಾಲಿ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನಕ್ಕೆ ಕರೆ

District Health and Family Welfare Department ಕರ್ನಾಟಕ ಮೆದುಳು ಆರೋಗ್ಯ...

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...