Friday, June 26, 2026
Friday, June 26, 2026

ಶಿವಮೊಗ್ಗ ಸ್ಮಾರ್ಟ್ ಸಿಟಿಗೆ ಮೈಯೆಲ್ಲ ಕಣ್ಣು.

Date:

ಇನ್ಮುಂದೆ ಶಿವಮೊಗ್ಗ ಜಿಲ್ಲೆಗೆ ಬರುವ ಮತ್ತು ಹೋಗುವ ಪ್ರತಿಯೊಂದು ವಾಹನದ ಮೇಲೆ ಕ್ಯಾಮರಾ ಕಣ್ಣಿಡಲಿದೆ.
ವೇಗವಾಗಿ ವಾಹನ ಚಲಾಯಿಸುವುದು ಸೇರಿ ಇನ್ಯಾವುದೇ ರೀತಿಯ ಅಪರಾಧ ಚಟುವಟಿಕೆಗಳು ನಡೆದಲ್ಲಿ ಅಂಥವುಗಳ ವಿವರವನ್ನು ವಾಹನದ ಸಂಪೂರ್ಣ ವಿವರ ಸಹಿತ ಪೊಲೀಸರು ಪಡೆಯಬಹುದಾಗಿದೆ.
ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಟ್ರಾಫಿಕ್ ನಿಯಮಗಳನ್ನು ಸ್ಮಾರ್ಟ್ ಆಗಿಸುವುದಕ್ಕಾಗಿ ಹಲವು ಯೋಜನೆಗಳನ್ನು ಹೊಂದಲಾಗಿದೆ. ಈಗಾಗಲೇ ಹಲವೆಡೆ ಕ್ಯಾಮೆರಾ ಅಳವಡಿಸಿದ್ದು, ಇವುಗಳ ಮೂಲಕ ನಗರದ ಪ್ರತಿಯೊಂದು ಚಟುವಟಿಕೆಗಳ ಮೇಲೆ ಕಣ್ಣಿಡಬಹುದಾಗಿದೆ. ಜೊತೆಗೆ ಸ್ಮಾರ್ಟ್ ಫೋಲ್ ಗಳನ್ನು ಅಳವಡಿಸಿದ್ದು, ಇದರಲ್ಲಿ ಕ್ಯಾಮೆರಾ, ಪಬ್ಲಿಕ್ ಅನ್ನೌನ್ಸ್ಮೆಂಟ್, ಪರದೆ, ವಾತಾವರಣ ಮೌಲ್ಯಮಾಪನ ಹೀಗೆ ಹಲವು ವ್ಯವಸ್ಥೆಗಳನ್ನು ತಲುಪಿಸಲಾಗಿದೆ ಎಂದು ಶಿವಮೊಗ್ಗ ಸ್ಮಾರ್ಟ್ ಸಿಟಿಯ ಎಂಡಿ ಚಿದಾನಂದ್ ವಟಾರೆ ಅವರು ತಿಳಿಸಿದ್ದಾರೆ.
ಈ ವ್ಯವಸ್ಥೆ ಶಿವಮೊಗ್ಗದಲ್ಲಿ ಆರಂಭಿಸುವುದಕ್ಕಾಗಿ ಈಗಾಗಲೇ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕೋಸ್ಕರ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ 41.83 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ.
ಇಂಟಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅಡಿ ಶಿವಮೊಗ್ಗ ನಗರಕ್ಕೆ ಬರುವ ಮತ್ತು ಹೊರಹೋಗುವ 9 ಪಾಯಿಂಟ್ ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವ್ಯವಸ್ಥೆ ರೂಪಿಸಿದ್ದು ಪೊಲೀಸ್ ಇಲಾಖೆಗೆ ಇದರಿಂದ ಭಾರಿ ಪ್ರಯೋಜನವಾಗಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kodachadri Chits Pvt. Ltd ಗ್ರಾಹಕರೇ ಕೊಡಚಾದ್ರಿಚಿಟ್ಸ್ ನ ಹಿಂದಿರುವ ಶಕ್ತಿ- ಪರಶುರಾಮ್

Kodachadri Chits Pvt. Ltd ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ...

Rotary Club Shivamogga ಮಲೇರಿಯಾವನ್ನ ವೈಜ್ಞಾನಿಕ ಕ್ರಮಗಳಿಂದ ನಿರ್ಮೂಲನೆ ಮಾಡಲು ಸಾಧ್ಯ. ಈ ಕಾರ್ಯದಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆ ಅನಿವಾರ್ಯ- ಡಾ.ಗುಡದಪ್ಪ ಕಸಬಿ

Rotary Club Shivamogga "ಮಳೆಗಾಲದಲ್ಲಿ ಸೊಳ್ಳೆಗಳಿಂದ ಹರಡುವ ರೋಗಗಳು ಉಲ್ಬಣಗೊಳ್ಳುವುದರಿಂದ ಸಾರ್ವಜನಿಕರಲ್ಲಿ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ...