Thursday, February 5, 2026
Thursday, February 5, 2026

ಅಡಕೆ ಸುಲಿಯಲು ಸುಲಭ ಸಾಧನ ಶಿಲ್ಪಿ: ವಿಶ್ವನಾಥ್

Date:

ಆಧುನಿಕ ತಂತ್ರಜ್ಞಾನದ ಮೂಲಕ ಕೃಷಿ ಕ್ಷೇತ್ರಕ್ಕೆ ಹಲವಾರು ಯಂತ್ರಗಳು ಕೊಡುಗೆಯಾಗಿವೆ. ಹಳ್ಳಿಗಳಲ್ಲಿ ಕೃಷಿ ಯಂತ್ರಗಳ ಸದ್ದು ಹೆಚ್ಚಾಗಿದ್ದು ಬಹುತೇಕ ರೈತರು ಯಂತ್ರಗಳನ್ನೇ ಅವಲಂಬಿಸಿದ್ದಾರೆ.
ಕೂಲಿ ಆಳುಗಳ ಸಮಸ್ಯೆ, ಪ್ರಕೃತಿ ವೈಪರೀತ್ಯ, ಸೇರಿದಂತೆ ಹಲವಾರು ಸಮಸ್ಯೆಗಳಿಂದ ಪಾರಾಗಲು ಮಲೆನಾಡು ಭಾಗದಲ್ಲಿ ರೈತರು ಕೃಷಿ ಯಂತ್ರಗಳನ್ನು ಹೆಚ್ಚಾಗಿ ಬಳಸುತ್ತಾರೆ. ಈ ವರ್ಷ ಪ್ರಕೃತಿ ರೈತರಿಗೆ ಕೈ ಕೊಟ್ಟಿದ್ದು ಅಡಿಕೆ ಸಂಸ್ಕರಣ ಸಾಧ್ಯವಿಲ್ಲದ ಪರಿಸ್ಥಿತಿ ಸೃಷ್ಟಿಸಿದೆ. ಈ ಬಾರಿ ಕೃಷಿ ಯಂತ್ರಗಳ ಸಂಶೋಧಕ ಕುಂಟವಳ್ಳಿ ವಿಶ್ವನಾಥ್ ಹೊಸ ಯಂತ್ರದ ಮೂಲಕ ರೈತರ ಕೈಹಿಡಿದಿದ್ದಾರೆ. ಈಗ ಅವರು ಸರಳ ತಾಂತ್ರಿಕತೆಯ ಹೊಂದಿದ ಹಣ್ಣಡಕೆ ಸುಲಿಯುವ ಯಂತ್ರವನ್ನು ಸಂಶೋಧಿಸಿ ಸಿದ್ಧಪಡಿಸಿದ್ದಾರೆ.
ಈ ಯಂತ್ರವು ಕಣ್ಣಡಕೆಯನ್ನು ಅತೀ ನಾಜೂಕಿನಿಂದ ಸುಲಿಯುವ ಸಾಮರ್ಥ್ಯವನ್ನು ಹೊಂದಿದೆ. ಎಂಟು ಕೆಜಿ ತೂಕದ ಕಣ್ಣಡಕೆಯನ್ನು ಸಿಪ್ಪೆ ಸಮೇತ ಎಂಟರಿಂದ ಹತ್ತು ನಿಮಿಷದಲ್ಲಿ ಸುಲಿಯುವ ನೈಪುಣ್ಯತೆ ಯಂತ್ರದ್ದಾಗಿದೆ‌. ಶೇ. 95ರಷ್ಟು ಹಣ್ಣಡಕೆ ರಾಶಿ ಇಡಿ ಅಡಿಕೆಯನ್ನಾಗಿಸುವ ಸಾಮರ್ಥ್ಯ ಯಂತ್ರಕ್ಕಿದೆ.
ಹಣ್ಣಡಕೆ ಸುಲಿಯುವ ಯಂತ್ರ ಚಿಕ್ಕದಾಗಿದ್ದು ರೈತರಿಗೆ ಉಪಯುಕ್ತ ಲಾಭಗಳಿವೆ. ಯಂತ್ರ ಸಂಶೋಧನೆಯಿಂದ ಹಣ್ಣಡಕೆ ಸುಲಿಯುವ ಚಿಂತೆ ರೈತರಿಗೆ ಈಗ ಇಲ್ಲವಾಗಿದೆ. ಮಾರುಕಟ್ಟೆಯಲ್ಲಿ ರಾಷ್ಟ್ರೀಯ ಅಡಿಕೆಗೆ ಉತ್ತಮ ಧಾರಣೆ ಇದ್ದು, ಹಣ್ಣಡಿಕೆ ಸುಲಿಯುವ ಯಂತ್ರ ಬಳಸಿದರೆ ಅತಿ ಹೆಚ್ಚು ಲಾಭ ಗಳಿಸಬಹುದಾದ ಅವಕಾಶ ರೈತರಿಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...