Sunday, December 14, 2025
Sunday, December 14, 2025

ಕೋವಿಡ್ ನಂತೆ ಓಮಿಕ್ರಾನ್ ನನ್ನು ಎದುರಿಸಬಹುದು : ಡಾ.ಸೌಮ್ಯ ಸ್ವಾಮಿನಾಥನ್

Date:

ಕೋವಿಡ್ ವೈರಸ್ ನ ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ಹರಡುವುದಕ್ಕಿಂತಲೂ ಮೂರು ಪಟ್ಟು ಹೆಚ್ಚು ತ್ವರಿತವಾಗಿ ಮರು ಸೋಂಕು ಹರಡುತ್ತಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಅವರು ತಿಳಿಸಿದ್ದಾರೆ.

‘ಓಮಿಕ್ರಾನ್ ರೂಪಾಂತರ ತಳಿಯನ್ನು ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಮೊದಲೇ ಪತ್ತೆ ಮಾಡಿದ್ದಾರೆ. ಅದೊಂದೇ ಕಾರಣಕ್ಕೆ ದಕ್ಷಿಣ ಆಫ್ರಿಕಾದಲ್ಲೇ ಓಮಿಕ್ರಾನ್ ವಿಕಾಸವಾಗಿದೆ ಎಂದಲ್ಲ. ಅದು ಬೇರೆ ದೇಶಗಳಲ್ಲಿ ವಿಕಾಸ ವಾಗಿರಬಹುದು. ಬಹುಶಃ ವೈರಾಣು ಸಂರಚನೆ ವಿಶ್ಲೇಷಣೆ ಇಲ್ಲದೆ ಇರುವ ದೇಶಗಳಲ್ಲಿ ಇದು ವಿಕಾಸವಾಗಿರಬಹುದು. ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ, ಓಮಿಕ್ರಾನ್ ಮೊದಲು ವಿಕಾಸ ವಾಗಿದ್ದು ಎಲ್ಲಿ ಎಂಬುದು ಪತ್ತೆಯಾಗದೆ ಇರುವ ಸಾಧ್ಯತೆಯೇ ಹೆಚ್ಚು’ ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಅಲ್ಲದೆ ‘ಗಾಬರಿಯಾಗುವ ಅಗತ್ಯವಿಲ್ಲ ಹಿಂದೆ ಬೇರೆ ತಳಿಗಳನ್ನು ಎದುರಿಸಿದ ಅನುಭವದ ಆಧಾರದಲ್ಲೇ ಓಮಿಕ್ರಾನ್ ತಡೆಗಟ್ಟಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು’ ಎಂದಿದ್ದಾರೆ.

ಕೋವಿಡ್ ತಡೆಗಟ್ಟಲು ನೀಡಲಾಗುತ್ತಿರುವ ಲಸಿಕೆಗಳು ಓಮಿಕ್ರಾನ್ ವಿರುದ್ಧ ಪರಿಣಾಮಕಾರಿಯಲ್ಲ ಎಂಬುದು ದೃಢಪಟ್ಟಿಲ್ಲ. ಅದನ್ನ ಪತ್ತೆಮಾಡುವ ಅಧ್ಯಯನಗಳು ನಡೆಯುತ್ತಿವೆ ಅಧ್ಯಯನಗಳು ಪೂರ್ಣವಾಗಲು ಇನ್ನೂ ಒಂದು ಅಥವಾ ಎರಡು ವಾರ ಬೇಕಾಗಬಹುದು ನಾವು ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಸೌಮ್ಯ ಸ್ವಾಮಿನಾಥನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...