Thursday, July 9, 2026
Thursday, July 9, 2026

ಕೋವಿಡ್ ನಂತೆ ಓಮಿಕ್ರಾನ್ ನನ್ನು ಎದುರಿಸಬಹುದು : ಡಾ.ಸೌಮ್ಯ ಸ್ವಾಮಿನಾಥನ್

Date:

ಕೋವಿಡ್ ವೈರಸ್ ನ ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ಹರಡುವುದಕ್ಕಿಂತಲೂ ಮೂರು ಪಟ್ಟು ಹೆಚ್ಚು ತ್ವರಿತವಾಗಿ ಮರು ಸೋಂಕು ಹರಡುತ್ತಿದೆ’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ ಡಾ. ಸೌಮ್ಯ ಸ್ವಾಮಿನಾಥನ್ ಅವರು ತಿಳಿಸಿದ್ದಾರೆ.

‘ಓಮಿಕ್ರಾನ್ ರೂಪಾಂತರ ತಳಿಯನ್ನು ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಮೊದಲೇ ಪತ್ತೆ ಮಾಡಿದ್ದಾರೆ. ಅದೊಂದೇ ಕಾರಣಕ್ಕೆ ದಕ್ಷಿಣ ಆಫ್ರಿಕಾದಲ್ಲೇ ಓಮಿಕ್ರಾನ್ ವಿಕಾಸವಾಗಿದೆ ಎಂದಲ್ಲ. ಅದು ಬೇರೆ ದೇಶಗಳಲ್ಲಿ ವಿಕಾಸ ವಾಗಿರಬಹುದು. ಬಹುಶಃ ವೈರಾಣು ಸಂರಚನೆ ವಿಶ್ಲೇಷಣೆ ಇಲ್ಲದೆ ಇರುವ ದೇಶಗಳಲ್ಲಿ ಇದು ವಿಕಾಸವಾಗಿರಬಹುದು. ಆದರೆ ಈಗಿನ ಪರಿಸ್ಥಿತಿ ಗಮನಿಸಿದರೆ, ಓಮಿಕ್ರಾನ್ ಮೊದಲು ವಿಕಾಸ ವಾಗಿದ್ದು ಎಲ್ಲಿ ಎಂಬುದು ಪತ್ತೆಯಾಗದೆ ಇರುವ ಸಾಧ್ಯತೆಯೇ ಹೆಚ್ಚು’ ಎಂದು ಸೌಮ್ಯ ಸ್ವಾಮಿನಾಥನ್ ಹೇಳಿದ್ದಾರೆ.

ಅಲ್ಲದೆ ‘ಗಾಬರಿಯಾಗುವ ಅಗತ್ಯವಿಲ್ಲ ಹಿಂದೆ ಬೇರೆ ತಳಿಗಳನ್ನು ಎದುರಿಸಿದ ಅನುಭವದ ಆಧಾರದಲ್ಲೇ ಓಮಿಕ್ರಾನ್ ತಡೆಗಟ್ಟಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕು’ ಎಂದಿದ್ದಾರೆ.

ಕೋವಿಡ್ ತಡೆಗಟ್ಟಲು ನೀಡಲಾಗುತ್ತಿರುವ ಲಸಿಕೆಗಳು ಓಮಿಕ್ರಾನ್ ವಿರುದ್ಧ ಪರಿಣಾಮಕಾರಿಯಲ್ಲ ಎಂಬುದು ದೃಢಪಟ್ಟಿಲ್ಲ. ಅದನ್ನ ಪತ್ತೆಮಾಡುವ ಅಧ್ಯಯನಗಳು ನಡೆಯುತ್ತಿವೆ ಅಧ್ಯಯನಗಳು ಪೂರ್ಣವಾಗಲು ಇನ್ನೂ ಒಂದು ಅಥವಾ ಎರಡು ವಾರ ಬೇಕಾಗಬಹುದು ನಾವು ಯಾವುದೇ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಸೌಮ್ಯ ಸ್ವಾಮಿನಾಥನ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...