Sunday, May 17, 2026
Sunday, May 17, 2026

ಓಮಿಕ್ರಾನ್ : ಸಂದೇಹ ಸಮಾಧಾನ – ಎಲ್ಲರಿಗೂ ಮಾಹಿತಿ

Date:

ಓಮಿಕ್ರಾನ್ ರೂಪಾಂತರಿ ಭಾರತಕ್ಕೆ ಕಾಲಿಟ್ಟ ಬೆನ್ನಲ್ಲೇ ಜನರು ಆತಂಕಕ್ಕೀಡಾಗಿದ್ದಾರೆ. ಜನರ ಮನಸ್ಸಿನಲ್ಲಿರುವ ಗೊಂದಲಗಳನ್ನು ಪರಿಹರಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಓಮಿಕ್ರಾನ್ ಗೊಂದಲಗಳಿಗೆ ಪ್ರಶ್ನೋತ್ತರ ರೂಪದಲ್ಲಿ ಉತ್ತರಿಸುವ ಪ್ರಯತ್ನ ಮಾಡಿದೆ.

ಲಸಿಕೆ ಪರಿಣಾಮಕಾರಿಯೇ?

ಇದುವರೆಗೆ ಬಳಸಲಾಗುತ್ತಿರುವ ಯಾವ ಲಸಿಕೆಯು ರೂಪಾಂತರಿಗಳ ವಿರುದ್ಧ ಪರಿಣಾಮಕಾರಿ ಅಲ್ಲ ಎಂಬುದು ದೃಢಪಟ್ಟಿಲ್ಲ. ಹೊಸ ರೂಪಾಂತರಿಗಳು ಲಸಿಕೆಯ ಸಾಮರ್ಥ್ಯ ಕುಂಠಿತಗೊಳಿಸಬಹುದು ಹೊರತು, ನಿಷ್ಕ್ರಿಯಗೊಳಿಸುವುದಿಲ್ಲ. ಆದ್ದರಿಂದ ಭಾರತದಲ್ಲಿಯೂ ಲಸಿಕೆಯ ಪರಿಣಾಮಕಾರಿತ್ವದ ಕುರಿತು ಸಂದೇಹ ಬೇಡ.

ಓಮಿಕ್ರಾನ್ ವಿರುದ್ಧ ನಾವೆಷ್ಟು ಜಾಗೃತರಾಗಿರಬೇಕು?

ಇದು ಸಹ ರೂಪಾಂತರಿಯೇ ಆಗಿರುವುದರಿಂದ ಹೆಚ್ಚಿನ ಕ್ರಮಗಳ ಅಗತ್ಯವಿಲ್ಲ. ಲಸಿಕೆ ಪಡೆಯುವುದು, ಅನವಶ್ಯಕವಾಗಿ ಮನೆಯಿಂದ ಹೊರಗೆ ಬರದಿರುವುದು, ಸಾಮಾಜಿಕ ಅಂತರ, ಮಾಸ್ಕ್ ಧಾರಣೆ, ಆಗಾಗ ಕೈ ತೊಳೆಯುವುದು, ಜನ ಸಂದಣಿಯ ಸಮಾರಂಭಗಳಿಗೆ ತೆರಳದಿರುವುದು, ಪೌಷ್ಟಿಕಾಂಶಯುತ ಆಹಾರ ಸೇವನೆ- ಇವಿಷ್ಟನ್ನು ಪಾಲಿಸಿದರೆ ಸಾಕು.

ರೂಪಾಂತರಿ ಅಪಾಯಕಾರಿಯೇ?

ಸಾರ್ಸ್ -ಸಿಒವಿ -2ನ ಹಲವು ರೂಪಾಂತರಿಗಳಂತೆ ಓಮಿಕ್ರಾನ್ ಸಹ ರೂಪಾಂತರಿ ಅಷ್ಟೇ. ಇದಕ್ಕೆ ಬಿ.1.1.529 ಎಂದು ಕರೆಯಲಾಗಿದೆ. ಗ್ರೀನ್ ಅಲ್ಫಾ ಬೆಟ್ ಗಳಾದ ಅಲ್ಪಾ, ಬೀಟಾ, ಡೆಲ್ಟಾದಂತೆ ಇದಕ್ಕೆ ಓಮಿಕ್ರಾನ್ ನ ಮೂವತ್ತಕ್ಕೂ ಅಧಿಕ ರೂಪಾಂತರಿಗಳು ಮನುಷ್ಯನ ದೇಹದ ರೋಗನಿರೋಧಕ ಶಕ್ತಿಯನ್ನು ಕುಂದಿಸುವ ಶಕ್ತಿ ಹೊಂದಿದೆ. ಆದರೆ ಹೊಸ ರೂಪಾಂತರಿ ಮಾರಣಾಂತಿಕ ಎಂಬುದು ಇದುವರೆಗೆ ಸಾಬೀತಾಗಿಲ್ಲ. ಹಾಗಾಗಿ ಭೀತಿಗೊಳಗಾಗುವ ಅವಶ್ಯಕತೆ ಇಲ್ಲ.

ಇದು ಮೂರನೇ ಅಲೆ ಆರಂಭವೇ?

ದಕ್ಷಿಣ ಆಫ್ರಿಕಾದಲ್ಲಿ ನವೆಂಬರ್ 24ರಂದು ಪತ್ತೆಯಾದ ಸೋಂಕು ಹತ್ತೇ ದಿನದಲ್ಲಿ ಮೂವತ್ತಕ್ಕೂ ಅಧಿಕ ದೇಶಗಳಿಗೆ ಹಬ್ಬಿದೆ ಯಾದರೂ, ಇದು ಮಾರಣಾಂತಿಕವೇ ಎಂಬುದು ದೃಢಪಟ್ಟಿಲ್ಲ. ಅಲ್ಲದೇ ಸಾಮೂಹಿಕವಾಗಿಯೂ ಹರಡುತ್ತಿಲ್ಲ. ದೇಶದಲ್ಲಂತೂ ನಿತ್ಯ ಪ್ರಕರಣಗಳ ಸಂಖ್ಯೆ ನಿಯಂತ್ರಣದಲ್ಲಿಯೇ ಇದೆ. ಹಾಗಾಗಿ ದೇಶದಲ್ಲಿ ಇದು ಮೂರನೇ ಅಲೆಗೆ ಕಾರಣವಾಗುತ್ತದೆ ಎಂಬ ಆತಂಕ ಬೇಕಿಲ್ಲ.

ಸುಲಭವಾಗಿ ಪತ್ತೆ ಸಾಧ್ಯವೇ?

ಬಹುತೇಕ ರೂಪಾಂತರಿಗಳನ್ನು ಆರ್ ಟಿಪಿಸಿಆರ್ ತಪಾಸಣೆಯಿಂದ ಪತ್ತೆ ಹಚ್ಚಬಹುದಾಗಿದೆ. ವೈರಾಣು ಹರಡುವಿಕೆಯ ತೀವ್ರತೆ, ಸೋಂಕಿನ ಪತ್ತೆ ಸೇರಿ ಹಲವು ವಿಧದಲ್ಲಿ ಪತ್ತೆಹಚ್ಚಬಹುದು. ಸದ್ಯ , ಓಮಿಕ್ರಾನ್ ನ ವೈರಾಣು ಹರಡುವಿಕೆಯ ತೀವ್ರತೆ ಹೆಚ್ಚಿಲ್ಲದ ಕಾರಣ ಜಿನೋಮ್ ಸೀಕ್ವೆನ್ಸಿಂಗ್ ಮೊರೆ ಹೋಗಲಾಗುತ್ತಿದೆ. ಹಾಗೊಂದು ವೇಳೆ ಹೊಸ ರೂಪಾಂತರಿಯ ಪ್ರಸರಣ ಹೆಚ್ಚಾದರೆ, ಅದರಲ್ಲೂ ಆರ್ ಟಿ- ಪಿಸಿಆರ್ ಪರೀಕ್ಷೆ ಮೂಲಕವೇ ಪತ್ತೆ ಹಚ್ಚಬಹುದಾಗಿದೆ.

ಡಬ್ಲ್ಯೂ ಎಚ್ ಒ ಹೇಳಿದ್ದೆನು?

ಹೊಸ ರೂಪಾಂತರಿಯು ವೇಗವಾಗಿ ಹರಡುವ, ಮನುಷ್ಯನ ದೇಹದಲ್ಲಿರುವ ರೋಗ ನಿರೋಧಕ ಶಕ್ತಿಯನ್ನು ಕುಂದಿಸುವ ಸಾಂಕ್ರಾಮಿಕವಾಗಿದೆ. ಇದುವರೆಗೆ ಯಾವ ದೇಶದಲ್ಲಿಯೂ ರೂಪಾಂತರಿ ವೈರಾಣುವಿನಿಂದ ಸಾವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...