Tuesday, August 25, 2026
Tuesday, August 25, 2026

ರಾಜ್ಯದ ಹಲವೆಡೆ ಮಳೆ : ರೈತರಿಗೆ ಬೆಳೆ ಸಂಕಷ್ಟ

Date:

ರಾಜ್ಯದ ಹಲವೆಡೆ ಶುಕ್ರವಾರ ಚಿಕ್ಕಮಗಳೂರು, ಮೈಸೂರು ಜಿಲ್ಲೆ ಸೇರಿದಂತೆ ಬಯಲುಸೀಮೆಯಲ್ಲಿ ಧಾರಾಕಾರ ಮಳೆ ಸುರಿದಿದೆ.

ಚಿಕ್ಕಮಗಳೂರು ಜಿಲ್ಲೆಯ ದಂದೂರು, ಕಡೂರು, ಬೀರೂರು ಭಾಗದಲ್ಲಿ ಸುರಿದಂತಹ ಮಳೆಯಿಂದಾಗಿ ಬೆಳೆ ಹಾನಿ ಉಂಟಾಗಿದೆ.

ಈ ಭಾಗಗಳಲ್ಲಿ ಬೆಳೆದಿದ್ದ ಮೆಕ್ಕೆಜೋಳ ರಾಗಿ ಬೆಳೆ ನೆಲಕಚ್ಚಿವೆ. ಅಡಿಕೆ, ತೆಂಗಿನ ತೋಟಗಳಲ್ಲಿ ನೀರು ನಿಂತಿದೆ. ಮಳೆಯಿಂದಾಗಿ ಶಿವನಿ ಕೆರೆ ಇರುವ ಸೇತುವೆ ಮೇಲೆ ನೀರು ಹರಿಯುತ್ತಿದ್ದು ವಾಹನಗಳ ಸಂಚಾರಕ್ಕೆ ತೊಂದರೆಉಂಟಾಗಿದೆ.

ರಾಮಗಿರಿ, ಗಂಗಸಮುದ್ರ ಕಣವಿ ಹಳ್ಳಿ ಸಿಂಗೇನಹಳ್ಳಿ ಸುತ್ತ -ಮುತ್ತ ಸುರಿದ ಭಾರಿ ಮಳೆಗೆ ಕೆರೆ ಕೋಡಿ ಬಿದ್ದಿದೆ.

ಮೈಸೂರು, ಕೊಡಗು ಮಂಡ್ಯ ಹಾಸನ ಜಿಲ್ಲೆಗಳಲ್ಲೂ ಕೂಡ ಗುಡುಗು ಸಹಿತ ಸುರಿದಂತಹ ವಿಪರೀತ ಮಳೆಯಿಂದಾಗಿ ಕೊಯ್ಲು ಮಾಡಿದ ಭತ್ತ ಕೊಯ್ದು ಹೋಗಿದೆ.

ಅಕಾಲಿಕ ಮಳೆಯು ಒಂದಲ್ಲ ಒಂದು ರೀತಿಯಲ್ಲಿ ರೈತರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಬೈಂದೂರು ರೈಲ್ವೇ ನಿಲ್ದಾಣ ಅಭಿವೃದ್ಧಿಗೆ ₹86 ಕೋಟಿ ಪ್ರಸ್ತಾವನೆ: ಸಂಸದ ಬಿ.ವೈ.ರಾಘವೇಂದ್ರ ಭೇಟಿ

B.Y. Raghavendra ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂಕಾಂಬಿಕಾ ರೋಡ್ ಬೈಂದೂರು...

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...