Thursday, March 26, 2026
Thursday, March 26, 2026

ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಂದ ಸಂಸ್ಕೃತಿ ಉಳಿವು- ದೊಡ್ಡಣ್ಣ.

Date:

ಕನ್ನಡ ಮಾಧ್ಯಮದಲ್ಲಿ ಓದಿದವರಿಂದ ಒಂದಿಷ್ಟು ಸಂಸ್ಕೃತಿ ಉಳಿಯುವ ಸಾಧ್ಯತೆಯಿದೆ. ಇದನ್ನು ಕಾನ್ವೆಂಟ್ ಮಕ್ಕಳಿಂದ ನಿರೀಕ್ಷಿಸಲಾಗದು ಎಂದು ಹಿರಿಯ ಚಿತ್ರನಟ ದೊಡ್ಡಣ್ಣನವರು ಹೇಳಿದ್ದಾರೆ.
ಶಿವಮೊಗ್ಗ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡದ ಕವಿಗಳಾದ ಪಂಪ ,ರನ್ನ ,ಪೊನ್ನ, ಜನ್ನ, ರಾಘವಾಂಕ, ಕುವೆಂಪು ಮತ್ತು ವಚನ ಸಾಹಿತ್ಯಗಳು, ಬೇಂದ್ರೆ ಸಾಹಿತ್ಯ ಇವೆಲ್ಲವೂ ಉಳಿಸಿ ಬೆಳೆಸಬೇಕಿದೆ. ಹಾಗಾಗಿ ಕನ್ನಡ ಮಾಧ್ಯಮ ಶಾಲೆಗಳಿಗೆ ಹೆಚ್ಚು ಒತ್ತು ನೀಡಬೇಕು ಎಂದರು.
ಆಂಗ್ಲ ಮಾಧ್ಯಮ ಶಾಲೆಯ ಮಕ್ಕಳಿಗೂ ಈ ಬಗ್ಗೆ ಆಸಕ್ತಿ ಮೂಡಿಸಬೇಕು.ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳು ತಂದೆ ತಾಯಿ ಗುರು ಹಿರಿಯರಿಗೆ ಗೌರವ ನೀಡುತ್ತಾರೆ ಎಂದು ಹೇಳಿದರು.
ಹಿರಿಯ ನ್ಯಾಯವಾದಿ ರೇವಣಸಿದ್ದಯ್ಯ ಮಾತನಾಡಿ, ಪತ್ರಿಕಾಭವನದಲ್ಲಿ ಗ್ರಂಥಾಲಯ ಸ್ಥಾಪನೆಗೆ rs.25000 ಧನಸಹಾಯ ನೀಡುವುದಾಗಿ ಭರವಸೆ ನೀಡಿದರು. ಪ್ರೆಸ್ ಟ್ರಸ್ಟ್ ಅಧ್ಯಕ್ಷ ಎನ್ .ಮಂಜುನಾಥ್, ಕಾರ್ಯದರ್ಶಿ ನಾಗರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...