Thursday, March 26, 2026
Thursday, March 26, 2026

ದೇಶದಲ್ಲಿ ಸಂತಾನೋತ್ಪತ್ತಿ ಕುಸಿತ

Date:

ದೇಶದಲ್ಲಿ ಸಂತಾನ ಉತ್ಪತ್ತಿ ಫಲವಂತಿಕೆ ಕುಸಿಯುತ್ತಿರುವುದಕ್ಕೆ ಗರ್ಭನಿರೋಧಕಗಳ ಬಳಕೆ ಯಲ್ಲಿ ಹೆಚ್ಚಳ ಕಾರಣ ಎಂದು ಕೇಂದ್ರ ಸರ್ಕಾರದ ಸಮೀಕ್ಷೆಯಿಂದ ತಿಳಿದುಬಂದಿದೆ.
ವಲಸೆ ಕಾರ್ಮಿಕರು ಹೆಚ್ಚಿರುವ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಪ್ರದೇಶದ ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಗಮನಹರಿಸಿ ಜನಸಂಖ್ಯೆ ನಿಯಂತ್ರಣಕ್ಕೆ ಮುಂದಾಗುತ್ತಿದ್ದೇವೆ. ಹೆಣ್ಣು ಮಕ್ಕಳಿಗೆ ಈ ನಿಟ್ಟಿನಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಜನಸಂಖ್ಯೆ ಸ್ಪೋಟ ತಡೆಯಲು ಇದು ಸಹಕಾರಿ ಎಂದು ಅಂತರಾಷ್ಟ್ರೀಯ ಜನಸಂಖ್ಯಾ ವಿಜ್ಞಾನಗಳ ಕೇಂದ್ರದ ನಿರ್ದೇಶಕರಾದ ಪ್ರೊ.ಕೆ.ಜೇಮ್ಸ್ , ಅವರು ತಿಳಿಸಿದ್ದಾರೆ.
5ನೇ ರಾಷ್ಟ್ರೀಯ ಕೌಟುಂಬಿಕ ಆರೋಗ್ಯ ಸಮೀಕ್ಷೆ ಫಲವಂತಿಕೆ ಕುಸಿಯುತ್ತಿರುವ ಸಂಗತಿಯನ್ನು ಬಯಲು ಮಾಡಿತ್ತು.ಅದೇ ಸಮೀಕ್ಷೆಯು, ಫಲವಂತಿಕೆ ಕ್ಷೀಣಿಸಲು ಗರ್ಭನಿರೋಧಕಗಳ ಬಳಕೆ ಹೆಚ್ಚಳವೇ ಕಾರಣ ಎಂಬುದನ್ನೂ ಪತ್ತೆ ಮಾಡಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ದೇಶದಲ್ಲಿ ಗರ್ಭನಿರೋಧಕ (ಮಾತ್ರೆ ಮತ್ತು ಸಾಧನ) ಬಳಕೆ ಶೇ.8.7ರಷ್ಟು ಜಾಸ್ತಿಯಾಗಿದೆ. ಐದು ವರ್ಷಗಳ ಮುನ್ನ ಶೇ.47.8ರಷ್ಟು ಜನರು ಗರ್ಭನಿರೋಧಕಗಳನ್ನು ಬಳಸುತ್ತಿದ್ದರೆ, ಈಗ ಪ್ರಮಾಣ ಶೇಕ.56.5ಕ್ಕೆ ಏರಿಕೆಯಾಗಿದೆ. ಅಂದರೆ ಚಿಕ್ಕ-ಚೊಕ್ಕ ಕುಟುಂಬದತ್ತ ಆಸಕ್ತಿ ತೋರಿಸುತ್ತಿರುವ ಭಾರತೀಯರು, ಹೆಚ್ಚೆಂದರೆ ಎರಡು ಮಕ್ಕಳನ್ನು ಮಾತ್ರ ಹೊಂದುವ ನಿರ್ಧಾರಕ್ಕೆ ಬಂದಿದ್ದಾರೆ. ಸಮಾಜದಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಬದಲಾವಣೆಗಳು ಕೂಡ ಇದಕ್ಕೆ ಕಾರಣ ಎಂದು ಸಮೀಕ್ಷೆ ಅಭಿಪ್ರಾಯಪಟ್ಟಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Prabhuling Kavalikatti ಅಸ್ಪೃಶ್ಯತೆ ನಿರ್ಮೂಲನೆಗೆ ಒತ್ತು ಜೊತೆಗೆ ಕಾಯಿದೆಯಡಿ ಕಟ್ಟುನಿಟ್ಟಿನ ಕ್ರಮ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮೇಲಿನ ದೌರ್ಜನ್ಯ ತಡೆ...

MESCOM ಮಾರ್ಚ್ 26. ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ ಸಭೆ.

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...

World Tuberculosis Day ಕ್ಷಯರೋಗಿಗಳು ದುಶ್ಚಟಗಳಿಂದ ದೂರವಿದ್ದು ,ಪೌಷ್ಠಿಕ ಆಹಾರ ಸೇವಿಸಿದರೆ ರೋಗ ವಾಸಿ- ಡಾ.ಕೆ.ಎಸ್.ನಟರಾಜ್.

World Tuberculosis Day ಸೂಕ್ತ ಚಿಕಿತ್ಸೆಯಿಂದ ಕ್ಷಯರೋಗದಿಂದ ಸಂಪೂರ್ಣರಾಗಿ ಗುಣಮುಖರಾಗಬಹುದಾಗಿದ್ದು, ಎಲ್ಲಾ...

Shimoga News ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳಿಸಿಕೊಳ್ಳಬೇಕು- ಎನ್.ಪ್ರಕಾಶ್

Shivamogga News ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳ ಕೌಶಲ್ಯವನ್ನು ಹೆಚ್ಚಿಸಲು ಮತ್ತು ಉನ್ನತ...