Sunday, December 14, 2025
Sunday, December 14, 2025

ಶರಪಂಜರ ಶಿವರಾಂ ನಿಧನ

Date:

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ನಿಧನ. ಕೆಲದಿನಗಳ ಹಿಂದೆ ಅಪಘಾತದಲ್ಲಿ ಶಿವರಾಂ ಅವರು ಗಾಯಗೊಂಡಿದ್ದರು. ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ಮನೆಯಲ್ಲಿ ಯಾರು ಇಲ್ಲದ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೊಸಕೆರೆಹಳ್ಳಿ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಿವರಾಂ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿ ಮೆದುಳು ನಿಷ್ಕ್ರಿಯಗೊಂಡ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಶಿವರಾಂ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

1938 ರಲ್ಲಿ ಮದ್ರಾಸ್ ಪ್ರಾಂತ್ಯದ ಚೂಡಸಂದ್ರ ಹಳ್ಳಿಯಲ್ಲಿ ಶಿವರಾಂ ಜನಿಸಿದರು. ಗುಬ್ಬಿ ನಾಟಕ ಕಂಪನಿಗೆ ಸೇರಿ ತಮ್ಮ ಬಣ್ಣದ ಬದುಕನ್ನ ಪ್ರಾರಂಭಿಸಿದರು.

ಕನ್ನಡದ ಮೇರು ನಟರಾದ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಪುಟ್ಟಣ್ಣ ಕಣಗಾಲ್, ಅಂಬರೀಶ್ ಅವರೊಂದಿಗೆ ನಟಿಸಿದ್ದರು.

ಅವರು ನಟಿಸಿದ ಶರಪಂಜರ ಚಿತ್ರದ ಅಡಿಗೆಭಟ್ಟನ ಪಾತ್ರ
ಅವರಿಗೆ ಜನಪ್ರಿಯತೆ ತಂದುಕೊಟ್ಟಿತು.
ಅಂದಿನಿಂದ ಶರಪಂಜರ ಶಿವರಾಂ ಎಂದೇ ಖ್ಯಾತರಾಗಿದ್ದರು

ಡಾ.ರಾಜಕುಮಾರ್, ಆರತಿ ನಟಿಸಿದ್ದ ‘ಹೃದಯ ಸಂಗಮ’ ಸಿನಿಮಾವನ್ನು ಶಿವರಾಂ ನಿರ್ದೇಶನ ಮಾಡಿದ್ದರು.

ಶಿವರಾಜ ಅವರು ಕನ್ನಡದಲ್ಲಿ 100ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ನಟರಾಗಿ ನಟಿಸಿದ್ದಾರೆ.

ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...