Sunday, September 6, 2026
Sunday, September 6, 2026

ಶರಪಂಜರ ಶಿವರಾಂ ನಿಧನ

Date:

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ನಿಧನ. ಕೆಲದಿನಗಳ ಹಿಂದೆ ಅಪಘಾತದಲ್ಲಿ ಶಿವರಾಂ ಅವರು ಗಾಯಗೊಂಡಿದ್ದರು. ಆಸ್ಪತ್ರೆಯಿಂದ ಮನೆಗೆ ಬಂದ ಬಳಿಕ ಮನೆಯಲ್ಲಿ ಯಾರು ಇಲ್ಲದ ವೇಳೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹೊಸಕೆರೆಹಳ್ಳಿ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಶಿವರಾಂ ಅವರ ಮೆದುಳಿನಲ್ಲಿ ರಕ್ತಸ್ರಾವವಾಗಿ ಮೆದುಳು ನಿಷ್ಕ್ರಿಯಗೊಂಡ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ಶಿವರಾಂ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.

1938 ರಲ್ಲಿ ಮದ್ರಾಸ್ ಪ್ರಾಂತ್ಯದ ಚೂಡಸಂದ್ರ ಹಳ್ಳಿಯಲ್ಲಿ ಶಿವರಾಂ ಜನಿಸಿದರು. ಗುಬ್ಬಿ ನಾಟಕ ಕಂಪನಿಗೆ ಸೇರಿ ತಮ್ಮ ಬಣ್ಣದ ಬದುಕನ್ನ ಪ್ರಾರಂಭಿಸಿದರು.

ಕನ್ನಡದ ಮೇರು ನಟರಾದ ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್, ಪುಟ್ಟಣ್ಣ ಕಣಗಾಲ್, ಅಂಬರೀಶ್ ಅವರೊಂದಿಗೆ ನಟಿಸಿದ್ದರು.

ಅವರು ನಟಿಸಿದ ಶರಪಂಜರ ಚಿತ್ರದ ಅಡಿಗೆಭಟ್ಟನ ಪಾತ್ರ
ಅವರಿಗೆ ಜನಪ್ರಿಯತೆ ತಂದುಕೊಟ್ಟಿತು.
ಅಂದಿನಿಂದ ಶರಪಂಜರ ಶಿವರಾಂ ಎಂದೇ ಖ್ಯಾತರಾಗಿದ್ದರು

ಡಾ.ರಾಜಕುಮಾರ್, ಆರತಿ ನಟಿಸಿದ್ದ ‘ಹೃದಯ ಸಂಗಮ’ ಸಿನಿಮಾವನ್ನು ಶಿವರಾಂ ನಿರ್ದೇಶನ ಮಾಡಿದ್ದರು.

ಶಿವರಾಜ ಅವರು ಕನ್ನಡದಲ್ಲಿ 100ಕ್ಕೂ ಅಧಿಕ ಚಿತ್ರಗಳಲ್ಲಿ ಪೋಷಕ ನಟರಾಗಿ ನಟಿಸಿದ್ದಾರೆ.

ಹಿರಿಯ ನಟ ಶಿವರಾಂ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು, ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...

Bhadra Reservoir ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ

Bhadra Reservoir ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ...